ರಾಯಚೂರು | ಅಂಗನವಾಡಿ ಕಾರ್ಯಕರ್ತರನ್ನು ಖಾಯಂಗೊಳಿಸಲು ಅಹೋ ರಾತ್ರಿ ಧರಣಿ

Date:

Advertisements

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು ಹಾಗೂ ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಲಾಯಿತು.

ಸಿಐಟಿಯು ರಾಜ್ಯ ಘಟಕದ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಎರಡು ದಿನಗಳ ಹೋರಾಟಕ್ಕೆ ಬೆಂಬಲಿಸಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿದರು.

ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 14 ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ಐಸಿಡಿಸಿ) 2023ರ ಆದೇಶದ ಪ್ರಕಾರ ಕೂಡಲೇ ಗ್ರಾಚ್ಯೂಟಿ ಹಣ ಬಿಡುಗಡೆ ಮಾಡಬೇಕು.

Advertisements

ಎಲ್ಲರಿಗೂ ಅನ್ವಯಿಸಿ 2018ರಿಂದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಗೌರವಧನ ಹೆಚ್ಚಳ ಮಾಡದ ಕಾರಣ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ. ಕೂಡಲೇ ₹26,000 ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

2025ರ ವಿಧಾನಸಭೆ ಚುನಾವಣೆಯಲ್ಲಿ ಘೋಷಣೆ ಮಾಡಿದ ₹15 ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತಿಯಾದ ವರಿಗೆ ಇಡಿಗಂಟು ಅಥವಾ ಒಪಿಎಸ್ ಹಣವನ್ನು ಹಾಗೂ ₹10 ಸಾವಿರ ಮಾಸಿಕ ಪಿಂಚಣಿಯನ್ನು ನೀಡಬೇಕು. ಶಿಕ್ಷಣ ಇಲಾಖೆ ಮತ್ತು ಎಡಿಎಂಸಿ ಗಳಿಂದ ಪ್ರಾರಂಭ ಮಾಡಿರುವ ಎಲ್‌ಕೆಜಿ, ಯುಕೆಜಿ ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿ ಸಬೇಕು ಎಂದು ಆಗ್ರಹಿಸಿದರು.

ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು. ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ, ವಿಧಾನಸಭೆ, ಲೋಕಸಭಾ ಚುನಾವಣೆಗಳು ಹಾಗೂ ಉಪಚುನಾವಣೆಗಳಲ್ಲಿ ಮತದಾರರನ್ನು ಗುರುತಿಸುವುದು, ಚುನಾವಣಾ ಸಂದಭದಲ್ಲಿ ಚೀಟಿ ಹಂಚುವುದು, ಬೂತ್‌ಗಳಲ್ಲಿ ಕೆಲಸಕ್ಕೆ ನಿಯೋಜಿಸುವುದರಿಂದ ದಿನನಿತ್ಯದ ಕೆಲಸಕ್ಕೆ ಸಮಸ್ಯೆಯಾಗುತ್ತಿದ್ದು ಚುನಾವಣೆ ಕಾರ್ಯಗಳಿಂದ ಮುಕ್ತಗೊಳಿಸಬೇಕು ಎಂದು ಮನವಿ ಮಾಡಿದರು.

ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್‌ಟಿಯಿಂದ ಹೊರಗಿಡಬೇಕು. ಘಟಕ ವೆಚ್ಚ ಹೆಚ್ಚಳ ಮಾಡಿ ಹಿಂದಿನಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳವ ವ್ಯವಸ್ಥೆ ಜಾರಿಯಾಗಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಬೇಕು.

ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ ಸೇವೆಗೆ ಹೆಚ್ಚುವರಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು. ಖಾಲಿ ಇರುವ ಮತ್ತು ಹೊಸ ಕೇಂದ್ರಗಳಿಗೆ ಸರ್ಕಾರಿ ಆದೇಶದಂತೆ ಮುಂಬಡ್ತಿ, ವರ್ಗಾವಣೆಗಳನ್ನೂ ನೀಡಿ ನಂತರ ಹೊಸ ಆಯ್ಕೆ ಮಾಡಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಅವಕಾಶದಿಂದ ವಂಚಿಸಬಾರದು.

ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವವರೆಗೆ ಸಹಾಯಕಿಯರಿಗೆ ಜವಾಬ್ದಾರಿ ನೀಡಬೇಕು ಹಾಗೂ ಗೌರವಧನ ಹೆಚ್ಚಳ ಮಾಡಬೇಕು. ಕರ್ತವ್ಯದ ವೇಳೆ ಉಂಟಾಗುವ ತಾಂತ್ರಿಕ ಅಡಚಣೆ ಸರಿಪಡಿಸಿ ಸುಧಾರಿಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ರಂಗಮ್ಮ ಅನ್ವರ, ವರಲಕ್ಷ್ಮಿ, ಗೋಕರಮ್ಮ, ರಮಾದೇವಿ, ಸರಸ್ವತಿ, ಮಹೇಶ್ವರಿ,ಸುಜಾತಾ, ರೂಪಾ, ಲಕ್ಷ್ಮಿ, ಶರಣಬಸವ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X