ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

Date:

Advertisements

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು.

“ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ರಾಯಚೂರು ರೈಲು ನಿಲ್ದಾಣದ ಹೊಸ ಕಟ್ಟಡ ನಿರ್ಮಾಣ ಪ್ರಾರಂಭಿಸುವುದು, ಸಿಂಧನೂರಿನಿಂದ ರಾಯಚೂರಿಗೆ ಹೊಸ ರೈಲು ಮಾರ್ಗದ ಬಾಕಿ ಕಾಮಗಾರಿಯನ್ನು ತ್ವರಿತಗೊಳಿಸುವುದು, ಗದಗದಿಂದ ವಾಡಿವರೆಗಿನ ಹೊಸ ರೈಲು ಮಾರ್ಗದ ಬಾಕಿ ಕಾಮಗಾರಿಯನ್ನು ತೀವ್ರಗೊಳಿಸಬೇಕು” ಎಂದು ಅವರು ಒತ್ತಾಯಿಸಿದರು.

ರಾಯಚೂರಿನಿಂದ ಯರಮರಸ್‌ಗೆ ಗುಡ್ ಶೆಡ್ ಸ್ಥಳಾಂತರ, ಸೋಲಾಪುರ-ಗುಂತಕಲ್ ಪ್ಯಾಸೆಂಜರ್ ಮರುಸ್ಥಾಪನೆ, ವಿಶಾಖಪಟ್ಟಣಂ-ಮಹೆಬೂಬ್‌ನಗರ ರೈಲನ್ನು ರಾಯಚೂರುವರೆಗೆ ವಿಸ್ತರಿಸುವ ಪ್ರಸ್ತಾವನೆ, ಮಚಲಿ ಪಟ್ಟಣಂ-ಮಂತ್ರಾಲಯ ವಿಶೇಷ ಟ್ರೈ-ಸಾಪ್ತಾಹಿಕ ಎಕ್ಸ್ಪ್ರೆಸ್ ಆರಂಭ, ಕಾಕಿನಾಡ-ರಾಯಚೂರು ವಿಶೇಷ ಟ್ರೈ-ಸಾಪ್ತಾಹಿಕ ಎಕ್ಸ್ಪ್ರೆಸ್ ಮರುಸ್ಥಾಪನೆ, ಬೆಳಗಾವಿ-ಮಂಗಳೂರು ಎಕ್ಸ್ಪ್ರೆಸ್ ಮರುಸ್ಥಾಪನೆ, ರಾಯಚೂರಿನಲ್ಲಿ ಯಶವಂತಪುರ ಎಸಿ ದುರಂತೋ ಎಕ್ಸ್ಪ್ರೆಸ್ ನಿಲುಗಡೆ, ರಾಯಚೂರಿನಲ್ಲಿ ಗೋರಖ್‌ಪುರ-ಯಶವಂತಪುರ ಎಕ್ಸ್ಪ್ರೆಸ್‌ಗೆ ನಿಲುಗಡೆ, ಯಶವಂತಪುರ-ಬಿಕಾನೇರ್ ಎಕ್ಸ್ಪ್ರೆಸ್ ಅನ್ನು ರಾಯಚೂರು ಮೂಲಕ ತಿರುಗಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ರಾಯಚೂರು | ಹದಿಹರೆಯದ ಮಕ್ಕಳ ಸಮಸ್ಯೆ-ಪರಿಹಾರಕ್ಕೆ ಜಾಗೃತಿ ಕೇಂದ್ರ ಆರಂಭ

ಮಂಚಲಾಪುರ ರಸ್ತೆ ರಾಯಚೂರು ರೈಲ್ವೆ ಗೇಟ್‌ನಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ, ಪ್ಲಾಟ್‌ಫಾರ್ಮ್ನಲ್ಲಿ ಆಹಾರ ಟ್ಯಾಂಕ್ ಪ್ಲಾಟ್‌ಫಾರ್ಮ್ನಲ್ಲಿ ಎಸ್ಕಲೇಟರ್‌ಗಳು, ಪ್ರಸ್ತುತದಲ್ಲಿ ಹೆಚ್ಚುವರಿ ಪ್ಲಾಟ್‌ಫಾರ್ಮ್ ಅಗತ್ಯವಿದೆ ಎಂದ ಅವರು, ನಗರದ ರೈಲ್ವೆ ನಿಲ್ದಾಣಕ್ಕೆ ಮೇಲಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಸಾದ್, ನಾಗೇಶ್ವರ ರಾವ್, ಬಸವರಾಜ್ ಅಸ್ಕಿಹಾಳ, ಹೇಮಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X