ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

Date:

Advertisements

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು‌ ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ ದಯಾಮರಣ ಕೋರಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಧ್ಯರಾತ್ರಿ ಧರಣಿ ನಡೆಸಿತು.

ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದ ಹನುಮಂತ ಎಂಬುವವರ ಕುಟುಂಬ ದಯಾಮರಣ ಕೋರಿ ಧರಣಿ ಕುಳಿತಿದೆ. ಇವರಿಗೆ ಸೇರಿದ ನಿವೇಶನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರತಾಪಗೌಡ ಬೆಂಬಲಿಗ ದುರ್ಗಾಪ್ರಸಾದ್‌ ಎಂಬಾತ ದಬ್ಬಾಳಿಕೆ ಮಾಡಿ ನಿವೇಶನದಲ್ಲಿ ಕಸ ಹಾಕಿ ಒತ್ತುವರಿ ಮಾಡಿದ್ದಾನೆ. ಇದನ್ನು ತೆರವುಗೊಳಿಸಲು ಮನವಿ ಮಾಡಿದರೆ ಬೆದರಿಕೆ ಹಾಕುತ್ತಿದ್ದಾನೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಗೆ ದೂರು ನೀಡಿದರೂ ರಾಜಕೀಯ ಪ್ರೇರಿತರಾಗಿ ಅಧಿಕಾರಿಗಳು ರಕ್ಷಣೆ ನೀಡುತ್ತಿಲ್ಲ ಎಂದು ಕುಟುಂಬಸ್ಥರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡರು.

ಆರೋಪಿಗಳ ದೌರ್ಜನ್ಯ, ಜೀವ ಬೆದರಿಕೆಯಿಂದ‌ ಬೇಸತ್ತಿದ್ದು, ರಕ್ಷಣೆ ನೀಡಿ ನ್ಯಾಯ ಒದಗಿಸಬೇಕು ಇಲ್ಲದಿದ್ದರೆ ನಮಗೆ ಸಾಯಲು ಅವಕಾಶ ನೀಡಬೇಕು ಎಂದು ಹನುಮಂತ ತೋರಣದಿನ್ನಿ ಪತ್ನಿ ಮತ್ತು ಮಕ್ಕಳೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಬಳಿಕ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ನೊಂದ ಕುಟುಂಬಸ್ಥರ ಮನ ಒಲಿಸಲು ಪ್ರಯತ್ನಿಸಿದರು. ಅದರೂ ರಾತ್ರಿಯಿಡೀ ಧರಣಿ ನಡೆಸಲಾಯಿತು. ‌ಜಿಲ್ಲಾಧಿಕಾರಿ ಅವರ ಮನವಿ ಆಲಿಸಿ ಸಮಸ್ಯೆ ಪರಿಹಾರಕ್ಕೆ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

ಮಸ್ಕಿ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದ್ದು, ಪ್ರಸ್ತುತ ಕಾಂಗ್ರೆಸ್‌ನ ಬಸವನಗೌಡ ತುರ್ವಿಹಾಳ ಅವರು ಶಾಸಕರಾಗಿದ್ದಾರೆ. ಅವರು ಪರಿಶಿಷ್ಟರ ಸಮಸ್ಯೆ ಆಲಿಸುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X