ರಾಯಚೂರು | ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನ; ಪೊಲೀಸರಿಗೆ ದೂರು

Date:

ಹಿಂದುಳಿದ ವರ್ಗದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗದಲ್ಲಿ ಮೂಬೈಲ್ ಇಟ್ಟು ವಿದ್ಯಾರ್ಥಿನಿಯರು ಶೌಚ ಮಾಡುವ ಚಿತ್ರೀಕರಣ ಸೆರೆ ಹಿಡಿಯಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

- Advertisement -

ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿನಿಲಯದ ಶೌಚಾಲಯದ ಹಿಂಭಾಗದಲ್ಲಿ ಚಿತ್ರೀಕರಣ ಮಾಡಲು ಡಿಸೆಂಬರ್‌ 19 ರಂದು ರಾತ್ರಿ 10ಕ್ಕೆ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಕಿಡಿಗೇಡಿಗಳು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಘಟನೆಯ ದಿನ ಶುಕ್ರವಾರ ರಾತ್ರಿ ವಾರ್ಡನ್‌ ಶಂಕ್ರಪ್ಪ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ 112 ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಇದು ಹೆಣ್ಣುಮಕ್ಕಳ ವಸತಿನಿಲಯ. ಈ ಕಡೆ ಯಾರೂ ಬರುವಂತಿಲ್ಲ ಎಂದು ಸುತ್ತಮುತ್ತ ಇರುವಂತಹ ಜನರಿಗೆ, ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಕರಡಿಗುಡ್ಡ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಬಾಲಕಿಯರು ಹಾಗೂ ಬಾಲಕರು ಇರುವಂತಹ ಹಾಸ್ಟೆಲ್ ಎಂದಿನಂತೆ ಬಾಲಕಿಯರು ರಾತ್ರಿ ತಮ್ಮ ದಿನನಿತ್ಯದ ಕಾರ್ಯ ಮುಗಿಸಲು ಶೌಚಾಲಯಕ್ಕೆ ಹೋಗಿರುವಾಗ ಶೌಚಾಲಯದ ಕಿಟಕಿಯ ಭಾಗದಲ್ಲಿ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ ವಿದ್ಯಾರ್ಥಿನಿ ತಕ್ಷಣ ತರಗತಿ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆ ವಸತಿ ಬಾಲಕರು, ವಾರ್ಡನ್ ಹಾಗೂ ಪ್ರಾಂಶುಪಾಲರು ಹಾಸ್ಟೆಲ್ ಕಾಂಪೌಂಡ್ ಹೊರಗೆ ತೆರಳಿ ಮೂಬೈಲ್ ಇಟ್ಟಿದ್ದ ಯುವಕನನ್ನು ಕಂಡುಹಿಡಿಯುವ ಪ್ರಯತ್ನ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೇಂದ್ರ ಗೃಹಸಚಿವ ಅಮಿತ್‌ ಶಾ ವಜಾಕ್ಕೆ ದಸಂಸ ಆಗ್ರಹ

ಮರುದಿನ ಶನಿವಾರ ರಾತ್ರಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಪಿ ಐ ವೀರಭದ್ರಯ್ಯ ಹಿರೇಮಠ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಾರ್ಡನ್‌ ಶಂಕ್ರಪ್ಪ ನೀಡಿದ ದೂರಿನ ಆಧಾರದ ಮೇಲೆ ಅನುಮಾನಾಸ್ಪದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...