ರಾಯಚೂರು | ಆ.29-30: ಧ್ಯಾನ್‌ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ

Date:

Advertisements

ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ 119ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29 ಮತ್ತು 30 ರಂದು ಹಾಕಿ ರಾಯಚೂರು(ಕರ್ನಾಟಕ) ಸಂಸ್ಥೆಯಿಂದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಯಪ್ರಕಾಶ್ ರೆಡ್ಡಿ ಹೇಳಿದರು.

ರಾಯಚೂರಿನ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಪುರುಷರು ಮತ್ತು ಮಹಿಳೆಯರ 24 ತಂಡಗಳು ಪಂದ್ಯಾವಳಿಯಲ್ಲಿ ಭಾಗಿಯಾಗಲಿವೆ ಎಂದರು.

12 ಪುರುಷ ಹಾಗೂ 8 ಮಹಿಳಾ ತಂಡಗಳು ಭಾಗವಹಿಸಲಿವೆ. ಹಾಕಿ ಪಂದ್ಯಕ್ಕೆ ಸಮರ್ಪಕ ಪ್ರೋತ್ಸಾಹ ದೊರೆಯುತ್ತಿಲ್ಲ. ಹಾಕಿ ಕ್ರೀಡಾಪಟುಗಳಿಗೆ ವಸತಿ ನಿಲಯವಿದ್ದು, ಕ್ರೀಡಾಂಗಣವೇ ಇಲ್ಲ. ಮಕ್ಕಳು ಹಾಕಿ ಆಟಗಳಲ್ಲಿ ಭಾಗವಹಿಸುತ್ತಿಲ್ಲ. ಜಿಲ್ಲೆಯಲ್ಲಿ ಕ್ರೀಡೆಗೆ ಪ್ರೋತ್ಸಾಹಿಸುವಂತಹ ಕೆಲಸ ಆಗಬೇಕೆಂದು ತಿಳಿಸಿದರು.

Advertisements

ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡು ದಿನಗಳ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯದಲ್ಲಿ 5 ಜನ ಕ್ರೀಡಾಪಟುಗಳು ಭಾಗಿ 20 ನಿಮಿಷ ಅವಧಿಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ವಿಜೇತ ತಂಡಗಳಿಗೆ ಎನ್.ಈಶ್ವರ ಪ್ರಸಾದ ಸ್ಮರಣಾರ್ಥ ಪ್ರಥಮ ತಂಡಕ್ಕೆ 10 ಸಾವಿರ ರೂ, ದ್ವಿತೀಯ ಸ್ಥಾನಕ್ಕೆ 5 ಸಾವಿರ ರೂ ನಗದ ಬಹುಮಾನ ಹಾಗೂ ಮಲ್ಲಿಕಾರ್ಜುನ ಸ್ಮರಣಾರ್ಥವೂ ಹೆಸರಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಕ್ರೀಡಾಕೂಟವನ್ನು ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

ಮುಖ್ಯ ಅತಿಥಿಗಳಾಗಿ ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರವಿ ಪಾಟೀಲ್ ಫೌಂಡೇಷನ್ ಅಧ್ಯಕ್ಷ ರವಿ ಪಾಟೀಲ್ , ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಸಂಸದ ಜಿ.ಕುಮಾರನಾಯಕ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್ ಕಾರ್ಯದರ್ಶಿ ಹನುಮಂತಪ್ಪ ನಾಯಕ, ಎನ್.ಶಶಿಕಲಾ, ಈಶ್ವರ್ ಪ್ರಸಾದ, ರಂಗನಾಥ ನಾಯಕ, ಅರ್ಜುನ ನಾಯಕ, ಮಹಮ್ಮದ್ ಇಸ್ಮಾಯಿಲ್, ಮೃತ್ಯುಂಜಯ, ಭಗತ್‌ಸಿಂಗ್ ಉಪಸ್ಥಿತರಿದ್ದರು.

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X