ರಾಯಚೂರು | ಅಂಬೇಡ್ಕರ್ ಜಯಂತಿಯಂದು ಮಾಂಸ ಮಾರಾಟ ನಿಷೇಧ; ಖಂಡನೆ

Date:

Advertisements

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏಪ್ರಿಲ್ 14ರಂದು ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ನಿಷೇಧಿಸಲಾಗಿದೆ. ಇದು ಅಂಬೇಡ್ಕರ್ ತಾತ್ವಿಕತೆಗೆ ವಿರುದ್ಧವಾದ ಮತ್ತು ತಳಸಮುದಾಯದ ಆಹಾರ ಸ್ವಾತಂತ್ರ್ಯವನ್ನು ಕಸಿಯುವ ಪ್ರಯತ್ನವಾಗಿದೆ. ಕೂಡಲೇ ನಿಷೇಧವನ್ನು ರದ್ದು ಮಾಡಬೇಕೆಂದು ಸಿಪಿಐ(ಎಂ) ಆಗ್ರಹಿಸಿದೆ.

ಅಧಿಕಾರಿಗಳ ಕ್ರಮವನ್ನು ಖಂಡಿಸಿರುವ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, “ಧರ್ಮದ ಹೆಸರಿನಲ್ಲಿ ಎಲ್ಲ ಜನ್ಮದಿನಗಳನ್ನು ಬ್ರಾಹ್ಮಣೀಕರಣ ಮಾಡಲಾಗುತ್ತಿದೆ. ರಾಷ್ಟ್ರ ನಾಯಕರ ದಿನಾಚರಣೆಗಳಂದು ಮಾಂಸ ಮಾರಾಟ ನಿಷೇಧ ಮಾಡಿರುವುದು ಜನಸಾಮಾನ್ಯರ ಆಹಾರ ಪದ್ದತಿಯ ಮೇಲೆ ಸವಾರಿ ಮಾಡಿದಂತೆಯೇ ಸರಿ. ಕೆಲಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಹಿಡನ್ ಅಜೆಂಡಾದ ಕಾರ್ಯ ಸಾಧನೆಗೋಸ್ಕರ ಇಂತಹ ಅವೈಜ್ಞಾನಿಕ ಪದ್ದತಿಗಳನ್ನು ಜನರ ಮೇಲೆ ಬಲವಂತವಾಗಿ ಹೇರಲು ಮುಂದಾಗುತ್ತಿದ್ದಾರೆ, ಇದು ಖಂಡನೀಯ” ಎಂದರು.

:ಸ್ವಾತಂತ್ರ್ಯ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಆಹಾರದ ಹಕ್ಕನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಇದನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಈಗಾಗಲೇ ಅಂಬೇಡ್ಕರ್ ಜಯಂತಿಯಂದೂ ಕೂಡ ಮಾಂಸ ಮಾರಾಟ ನಿಷೇಧ ಮಾಡಲು ಮುಂದಾಗಿರುವುದು ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ಆಶಯಗಳಿಗೆ ವಿರುದ್ದವಾದುದು” ಎಂದು ಹೇಳಿದರು.

Advertisements

“ಅಂಬೇಡ್ಕರ್ ಎಲ್ಲೂ ಕೂಡ ಅವರ ಬರಹ ಅಥವಾ ಭಾಷಣಗಳಲ್ಲಿ ಮಾಂಸ ಸೇವಿಬಾರದು ಎಂದು ಉಲ್ಲೇಖಿಸಿಲ್ಲ. ದಲಿತರ ಎಲ್ಲ ಆಚರಣೆಗಳಲ್ಲೂ ಮಾಂಸ ಆಹಾರ ಇರಬೇಕು. ಹೀಗಿದ್ದಾಗ ದಲಿತರ ಆಹಾರ ಪದ್ದತಿಯೂ ಪುರೋಹಿತಶಾಹಿ ವ್ಯವಸ್ಥೆಯಡಿ ತರಲು ಮುಂದಾಗಿರುವುದು ದಬ್ಬಾಳಿಕೆಯ ಪರಮಾವಧಿಯನ್ನು ತೋರಿಸುತ್ತದೆ. ಹೀಗಾಗಿ ಡಾ. ಅಂಬೇಡ್ಕರ್ ಅವರ ಮೇಲೆ ನಿಜವಾದ ಕಾಳಜಿ ಇದ್ದರೆ ಸಂಪೂರ್ಣ ಮದ್ಯಪಾನ ನಿಷೇಧ ಜಾರಿ ಮಾಡಲಿ” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X