ರಾಯಚೂರು | ಸ್ವಾತಂತ್ರ್ಯ ದಿನದಂದು ‘ಬರೀ ಹೊಟ್ಟೆ ಸತ್ಯಾಗ್ರಹ’

Date:

Advertisements

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ನಡೆದ ಹೋರಾಟಕ್ಕೆ ಮಣಿಸಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ನಂತರ ಬಂದ ಸರ್ಕಾರಗಳ ನಿರ್ಲಕ್ಷ್ಯದಿಂದ ಸಮಿತಿಯೂ ಮೂಲೆ ಗುಂಪಾಯಿತು. ಈಗ ಸಮಿತಿ ಮತ್ತೆ ಜೀವ ತುಂಬಬೇಕು. ಅದಕ್ಕಾಗಿ ಸರ್ಕಾರವನ್ನು ಒತ್ತಾಯಿಸಿ ಆಗಸ್ಟ್‌ 14-15 ನಡುವಿನ ರಾತ್ರಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯು ‘ಬರೀ ಹೊಟ್ಟೆ ಸತ್ಯಾಗ್ರಹ’ ಆಯೋಜಿಸಿದೆ ಎಂದು ಹೋರಾಟ ಸಮಿತಿ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಈ ಹಿಂದೆ ಇದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದೊರೆಸ್ವಾಮಿ ಅವರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಕೆಗಾಗಿ ಮತ್ತೊಮ್ಮೆ ಹೋರಾಟಗಾರರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಬೇಕು” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂದು ಫಾರಂ 57 ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರು. ಆದರೆ, ನಂತರ ಅದು ನಿಂತು ಹೋಯಿತು. ಸುಮಾರು ವರ್ಷಗಳಿಂದ ಭೂಮಿ, ವಸತಿ ಇಲ್ಲದವರು ಹೋರಾಟ ನಡೆಯುತ್ತಿದ್ದರೂ ಸರ್ಕಾರಗಳು ನಿರ್ಲಕ್ಷಿಸುತ್ತಾ ಬಂದಿವೆ. ಇಲ್ಲಿಯವರಗೆ ಕಾದು ಸಾಕಾಗಿದೆ. ಈಗ ‘ಮಾಡು ಇಲ್ಲವೇ ಮಡಿ’ ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಹೇಳಿದ್ದಾರೆ.

Advertisements

ಹೋರಾಟ ಸಮಿತಿಯ ಮುಖಂಡ ಎಂ.ಆರ್ ಭೇರಿ ಮಾತನಾಡಿ, “ಕಳೆದ 45 ವರ್ಷಗಳಿಂದ ಸರ್ಕಾರಿ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ಭೂಮಿ ಹಕ್ಕು ನೀಡದೇ ಸರ್ಕಾರಗಳು ಕಡೆಗಣಿಸುತ್ತಲೇ ಬಂದಿವೆ. ಗ್ರಾಮೀಣ ಪ್ರದೇಶಗಳಲ್ಲಿ ಅರಣ್ಯ ಹಾಗೂ ಸರ್ಕಾರ ಭೂಮಿ ಉಳುಮೆ ಮಾಡುವರರಿಗೆ ಭೂಮಿ ಹಕ್ಕು ನೀಡಬೇಕು. ನಗರ ಪ್ರದೇಶದಲ್ಲಿ 94 ಸಿಸಿ ಅರ್ಜಿ ಹಾಕಿದವರಿಗೆ ನಿವೇಶನ ನೀಡುವ ಸೇರಿ ಹಸಿದವರಿಗೆ ಅನ್ನಭಾಗ್ಯ ನೀಡಿದಂತೆ, ಭೂಮಿ ಇಲ್ಲದವರಿಗೆ ಭೂಮಿ ಗ್ಯಾರಂಟಿ ನೀಡಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಹೋರಾಟಗಾರ ಭೀಮಣ್ಣ ನಗನೂರು, ಖಾಜಾ ಅಸ್ಲಂ ಪಾಷಾ, ಆಂಜಿನೇಯ್ಯ ಕುರುಬದೊಡ್ಡಿ, ಹನುಮಂತಪ್ಪ, ನರಸಿಂಹಲು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X