ರಾಯಚೂರು | ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಬಿಜೆಪಿ ಯುವ ನಾಯಕ 6 ತಿಂಗಳು ಗಡಿಪಾರು

Date:

Advertisements

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರ ಆಸ್ತಿ ನಾಶ, ಸಮಾಜಘಾತುಕ ಕೃತ್ಯ, ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಿಜೆಪಿ ಯುವ ಮುಖಂಡ, ವಾರ್ಡ್ ನಂಬರ್ 1 ಪಟ್ಟಣ ಪಂಚಾಯತಿ ಸದಸ್ಯೆಯ ಪುತ್ರ ರೋನಾಲ್ಡ್ ಅಗಸ್ಟೀನ್ ಅಲಿಯಾಸ್ ಸನ್ನಿ ಎಂಬಾತನ್ನು 6 ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ರಾಯಚೂರು ಉಪ ವಿಭಾಗೀಯ ದಂಡಾಧಿಕಾರಿ ಗಜಾನನ ಬಾಲೆ ಆದೇಶಿಸಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆ ಉಪ ಅಧೀಕ್ಷಕರು ಸಲ್ಲಿಸಿರುವ ದೂರಿನ ಮೇರೆಗೆ ವಿಚಾರಣೆ ಈ ನಡೆಸಿ ಸನ್ನಿ ವಿರುದ್ಧ ಸ್ಥಳೀಯ ಪಶ್ಚಿಮ
ಠಾಣೆಯ ವ್ಯಾಪ್ತಿಯಲ್ಲಿ ದಾಖಲಾದ 8 ಪ್ರಕರಣಗಳಲ್ಲಿ ಒಂದು ವಿಚಾರಣೆ ಬಾಕಿ ಇದ್ದು ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ನಗರದ ರಾಮಾಂಜನೇಯ ಕಾಲೋನಿಯಲ್ಲಿ 20 ಜನರ ಯುವಕರ ಗ್ಯಾಂಗ್ ಕಟ್ಟಿಕೊಂಡು 2014 ರಿಂದ ನಿರಂತರವಾಗಿ ಅನೇಕರಿಗೆ ಬೆದರಿಕೆ, ಕೊಲೆ ಯತ್ನ, ಸಾರ್ವಜನಿಕವಾಗಿ ಲಾಂಗು,‌ಮಚ್ಚು‌ ಸೇರಿ‌ ಮಾರಾಕಾಸ್ತ್ರಗಳ ಪ್ರದರ್ಶನ ಮಾಡಿ ದೌರ್ಜನ್ಯ ಎಸಗುತ್ತಿದ್ದ ಆರೋಪಿಸಲಾಗಿದೆ.

ತಾಯಿ ನಗರಸಭೆ ಸದಸ್ಯೆಯಾಗಿರುವ ಕಾರಣ ರಾಜಕೀಯ ಅಧಿಕಾರ ದುರುಪಯೋಗ‌ ಪಡೆದು ಕಾರ್ಮಿಕರ ಮೇಲೆ ದರ್ಪ ತೋರಿಸಿ‌ ಅಮಾನವೀಯವಾಗಿ ವರ್ತಿಸುತ್ತಾ ಅವರ‌ ಕುರಿತು ಪ್ರಶ್ನಿಸಿದವರಿಗೆ, ಕೇಸ್ ದಾಖಲಿಸಲು ಯತ್ನಿಸಿದರೆ ಮನೆಗೆ‌ ನುಗ್ಗಿ ಜೀವ ಬೆದರಿಕೆ ಹಾಕುತ್ತಿದ್ದ ಎಂದು ಪೊಲೀಸರು ಸಲ್ಲಿಸಿದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಜು.21 ರಿಂದ 2026 ಜನವರಿಗೆ 27 ವರೆಗೆ ಜಿಲ್ಲೆಯನ್ನು ಪ್ರವೇಶಿಸುವದನ್ನು ನಿರ್ಬಂಧಿಸಲಾಗಿದೆ. ಶಾಂತಿಭಂಗ, ಸಮಾಜಿಕವಾಗಿ ಜನರಲ್ಲಿ ಭಯ ಹುಟ್ಟಿಸುವ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿರುವ ದೂರುಗಳ ಮೇಲೆ ಗಡಿಪಾರು ಮಾಡಲು ವಿಚಾರಣೆ ನಡೆಸಿದ್ದು ಆರೋಪಿ ಗೈರು ಹಾಜರಾಗಿ ಯಾವುದೇ ಆಕ್ಷೇಪಣೆ ಸಲ್ಲಿಸದೇ ಇರುವದರಿಂದ ಗಡಿಪಾರಿಗೆ ಆದೇಶಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ಮಾಡಿ ಶಾಲೆಯ ಬಾಗಿಲಿಗೆ ಮಲಗಿದ ; ಮುಖ್ಯಗುರು ಅಮಾನತು

ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿರುವ ದೂರುಗಳ ಮೇಲೆ ಚಾಮರಾಜನಗರದ ಹನೂರು ತಾಲೂಕಿನ ರಾಮಪುರು ಠಾಣೆಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X