ರಾಯಚೂರು | ಯುವ ನಾಯಕ ಸನ್ನಿ ಗಡಿಪಾರಿಗೆ ರಾಜಕೀಯ ಪ್ರೇರಿತ ಆದೇಶ – ಜೆಬಿ.ರಾಜು ಆರೋಪ

Date:

Advertisements

ಮಾದಿಗ ಸಮುದಾಯದಲ್ಲಿ ರಾಜಕೀಯವಾಗಿ ಬೆಳೆಯುತ್ತಿರುವ ಯುವ ನಾಯಕ ರೋನಾಲ್ಡ್ ಅಗಸ್ಟೀನ್ (ಸನ್ನಿ) ಅವರನ್ನು ರಾಯಚೂರು ವಿಭಾಗೀಯ ದಂಡಾಧಿಕಾರಿ (ಸಹಾಯಕ ಆಯುಕ್ತರು) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದು ರಾಜಕೀಯ ಪ್ರೇರಿತ ದುರುದ್ದೇಶದಿಂದ ಕೂಡಿದೆ ಇದರ ವಿರುದ್ಧ ಕಾನೂನು ಹಾಗೂ ಹೋರಾಟ ರೂಪಿಸುತ್ತೇವೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಜೆ.ಬಿ.ರಾಜು ತಿಳಿಸಿದರು.

ನಗರದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಗುಂಡಾ ಕಾಯಿದೆಯಡಿ ಗಡಿಪಾರು ಮಾಡುವ ಅಧಿಕಾರಿ ಸಹಾಯಕ ಆಯುಕ್ತರಿಗಿಲ್ಲ. ಅಲ್ಲದೆ, ಜಿಲ್ಲಾ ದಂಡಾಧಿಕಾರಿ ಆದೇಶ ಮಾಡಬೇಕಿತ್ತು. ಕೆಲ ಪ್ರಕರಣಗಳಲ್ಲಿ ದುರುದ್ದೇಶದಿಂದ ಸನ್ನಿ ಅವರ ಹೆಸರು ಸೇರಿಸಿದ್ದಾರೆ. ರಾಜಕೀಯ ಪ್ರೇರಿತ ಆದೇಶವಾಗಿದೆ. ಇದರ ಹಿಂದೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಕೈವಾಡವಿದೆ ಎಂದು ಆರೋಪಿಸಿದರು.

ರವಿಬೋಸರಾಜು ಯಾರು ಅವರೇನು ಜನಪ್ರತಿನಿಧಿಯೇ 2014ರಲ್ಲಿ ನಡೆದ ಘಟನೆಯ ವರದಿ ಪೂರ್ಣ ಓದಿ ಪರಿಶೀಲಿಸದೆ ಇಲ್ಲಿನ ಅಧಿಕಾರಿಗಳು ಅವರ ಕೈಗೊಂಬೆಯಂತೆ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ಆದೇಶದ ವಿರುದ್ಧ ವಿವಿಧ ಜಿಲ್ಲೆಗಳಲ್ಲಿರುವ ಮಾನದಂಡ, ರಾಯಚೂರು ಜಿಲ್ಲೆಯಲ್ಲಿ ಈ ಪ್ರಕರಣದಲ್ಲಿ ಮಾಡಿದ ಮಾನದಂಡಗಳನ್ನು ಪರಿಶೀಲಿಸಲು ಹೈಕೋರ್ಟ್‍ನಲ್ಲಿ ಕಾನೂನು ಹೋರಾಟ ಆರಂಭಿಸಿದ್ದೇವೆ. ಅಲ್ಲದೆ, ಸಹಾಯಕ ಆಯುಕ್ತರ ಕಚೇರಿ ಮುಂದೆ ಒಕ್ಕೂಟದಿಂದ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗೊಬ್ಬರ ಕಾಳಸಂತೆ ; 79 ಟನ್ ಯೂರಿಯಾ ಮಾರಾಟ ಆರೋಪ

ಒಕ್ಕೂಟದ ಪದಾಧಿಕಾರಿಗಳಾದ ಕೆ.ಪಿ ಅನಿಲಕುಮಾರ್, ಜನಾರ್ಧನ ಹಳ್ಳಿಬೆಂಚಿ,ಶಿವರಾಜ ಅಕ್ಕರಕಿ, ಹನುಮಂತ ಮನ್ನಾಪುರ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X