ರಾಯಚೂರು ತಾಲೂಕಿನ ಗುರ್ಜಾಪುರ ಬಳಿಯ ಸೇತುವೆ ಮೇಲಿಂದ ಮಹಿಳೆಯೊಬ್ಬರು ತನ್ನ ಪತ್ನಿಯನ್ನು ತಳ್ಳಿದ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಸೇತುವೆ ಮಾರ್ಗದಿಂದ ತೆರಳಿದ್ದ ನವದಂಪತಿ ಫೋಟೊ ತೆಗೆಸಿಕೊಳ್ಳಲು ಸೇತುವೆ ಮೇಲೆ ನಿಂತಿದ್ದರು. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೊ ತೆಗೆಯಲು ಪತ್ನಿಗೆ ಹೇಳಿದ್ದಾನೆ. ಸೇತುವೆ ತುದಿಗೆ ನಿಲ್ಲಿಸಿದ ಪತ್ನಿ ಫೊಟೊ ತೆಗೆಯುವ ನೆಪದಲ್ಲಿ ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದಾನೆ.
ನದಿಯಲ್ಲಿ ಈಜಿಕೊಂಡು ಹೋಗಿ ಕಲ್ಲು ಬಂಡೆಯಲ್ಲಿ ಕುಳಿತುಕೊಂಡ ಆ ವ್ಯಕ್ತಿ ತನ್ನ ರಕ್ಷಣೆಗಾಗಿ ಜೋರಾಗಿ ಕೂಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಹಗ್ಗದ ನೆರವಿನೊಂದಿಗೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಈ ದಂಪತಿ ಎಲ್ಲಿಯವರು, ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರಕ್ತಸ್ರಾವ ; ಬಾಣಂತಿ ಸಾವು
ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದು, ಘಟನೆ ಬಗ್ಗೆ ಇನ್ನೂ ವಿವರಣೆ ಸಿಕ್ಕಿಲ್ಲ. ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿದ್ದು, ಸೇತುವೆಯಲ್ಲಿ ನೀರಿನಲ್ಲಿ ಮೊಸಳೆಗಳ ಕಾಟ ಹೆಚ್ಚಾಗಿದ್ದು ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡು ಬಂದಿದ್ದಾನೆ.
