ರಾಯಚೂರು | ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವಷ್ಟೇ ಮುಖ್ಯ: ಚನ್ನಬಸವ

Date:

Advertisements

ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಅಭಿಪ್ರಾಯಪಟ್ಟರು.

ನಗರದ ಮಾವಿನಕೆರೆ ಉದ್ಯಾನವನದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ರಾಜಿರಹಿತ ಪಂಥದ ನಾಯಕ ಚಂದ್ರಶೇಖರ್ ಆಜಾದ್ ಅವರ ಸ್ಮರಣ ದಿನವನ್ನು ಆಚರಿಸಿ ಮಾತನಾಡಿದ ಅವರು, “ಆಜಾದ್ ಅವರು ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ತಮ್ಮದೇ ಆದ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಬಲ ಶಕ್ತಿಗಳು ದುರ್ಬಲರ ಮೇಲೆ ನಡೆಸುತ್ತಿದ್ದ ಶೋಷಣೆಯನ್ನು ಕೊನೆಗಾಣಿಸಬೇಕು ಎಂಬುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿತ್ತು. ಅಂತಹ ಮಹನೀಯರ ದೇಶಪ್ರೇಮ, ತ್ಯಾಗ, ಬಲಿದಾನಗಳೇ ಇಂದು ನಾವು ಸ್ವತಂತ್ರವಾಗಿ ಬದುಕಲು ಕಾರಣ” ಎಂದರು.

“ಬ್ರಿಟಿಷರ ವಿರುದ್ಧ ನಡೆದ ಗುಂಡಿನ ಕಾಳಗದಲ್ಲಿ ಆಜಾದ್ ಮರಣ ಹೊಂದಿದರು. ಹೋರಾಟದ ಕಿಚ್ಚು ಅಂದಿನ ಯುವ ಜನರಿಗೆ ಸ್ಪೂರ್ತಿಯ ಸೆಲೆಯಾಗಿತ್ತು. ಅವರ ಜೀವನಾದರ್ಶಗಳು ಇಂದಿಗೂ ಜೀವಂತ. ಅಂತಹ ವೀರ ನಾಯಕರನ್ನು ಮತ್ತೆ ಮತ್ತೆ ಸ್ಮರಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅಗತ್ಯವೆಂದು” ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

Advertisements

ಈ ವೇಳೆ ಹಿರಿಯ ಉಪನ್ಯಾಸಕ ಅಮೃತ್, ಎನ್ಎಸ್ಎಸ್ ಅಧಿಕಾರಿ ರಂಜಿತ್ ಕುಮಾರ್, ಉಪನ್ಯಾಸಕ ನರೇಶ್ ಕುಮಾರ್, ಪ್ರವೀಣ್ ಹಾಗೂ ಹಲವು ವಿದ್ಯಾರ್ಥಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X