ರಾಯಚೂರು | ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Date:

Advertisements

ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.

ಮೃತಪಟ್ಟಿರುವ ಯುವಕನನ್ನು ರಾಘವೇಂದ್ರ (38) ಎಂದು ಗುರುತಿಸಲಾಗಿದೆ. ಮಾನ್ವಿ ತಾಲೂಕಿನ ಗೋವಿನದೊಡ್ಡಿ ಗ್ರಾಮದ ನಿವಾಸಿಎಂದು ತಿಳಿದುಬಂದಿದೆ.

ಬೆಳೆಗೆ ಕ್ರಿಮಿನಾಶಕ ಖರೀದಿ ಮಾಡುವುದಕ್ಕೆಂದು ಪಟ್ಟಣಕ್ಕೆ ಬರುತ್ತಿದ್ದ ವೇಳೆ ಗೋವಿನದೊಡ್ಡಿ ಕ್ರಾಸ್ ಬಳಿ ಕಾರು ರಭಸವಾಗಿ ಡಿಕ್ಕಿಯಾಗಿದೆ.

Advertisements
WhatsApp Image 2024 10 18 at 3.21.33 PM

ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನಿಡಿದ್ದಾರೆ. ಅಪಘಾತ ನಡೆದ ತಕ್ಷಣ ಕಾರು ಚಾಲಕ, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಮೃತಪಟ್ಟಿರುವ ರಾಘವೇಂದ್ರರಿಗೆ ಇಬ್ಬರು ಮಕ್ಕಳಿದ್ದು, ಅನಾಥರಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮಾನ್ವಿ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದೇ ರಸ್ತೆಯಲ್ಲಿ ಈ ಹಿಂದೆಯು ಕೂಡ ಶಾಲಾ ವಾಹನ ಡಿಕ್ಕಿಯಾಗಿ ಮಕ್ಕಳು ಗಂಭೀರ ಗಾಯಗೊಂಡಿದ್ದರು. ಅಧಿಕಾರಿಗಳ ನಿರ್ಲಕ್ಷ್ಯದ ಕಾರಣಕ್ಕೆ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮಾನ್ವಿ ಹಾಗೂ ರಾಯಚೂರು ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿಯೇ ಅಪಘಾತಗಳು ನಡೆಯುತ್ತಿದೆ. ಆದ್ದರಿಂದ ಶೀಘ್ರವೇ ಕಾಮಗಾರಿ ಮುಗಿಸಿ, ಸೂಕ್ತ ಸೌಲಭ್ಯಗಳಿರುವ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Image 2024 10 18 at 3.21.32 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X