ರಾಯಚೂರು | ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಗಡಿಪಾರಿಗೆ ಚಲವಾದಿ ಮಹಾಸಭಾ ಮಹಿಳಾ ಘಟಕ ಆಗ್ರಹ

Date:

Advertisements

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಲೋಕಸಭಾ ಚಳಿಗಾಲ ಆದಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಡಿಸೆಂಬರ್‌ 18ರಂದು ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ” ಎಂದರು.

“ಅಂಬೇಡ್ಕ‌ರ್ ಹೆಸರು ಹೇಳುವುದು ಈಗ ಶೋಕಿಯಾಗಿಬಿಟ್ಟಿದೆ. ಇಷ್ಟೊಂದು ಬಾರಿ ದೇವರು ಹೆಸರು ಹೇಳಿದ್ದರೆ ಏಳು ಜನ್ಮಗಳವರಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತೆಂದು ಲೋಕಸಭಾ ಕಲಾಪದಲ್ಲಿ ನಾಲಿಗೆ ಹರಿಬಿಟ್ಟು ಬಾಬಾ ಸಾಹೇಬರಿಗೆ ಅವಮಾನ ಮಾಡುವ ಮೂಲಕ ರಾಷ್ಟ್ರದ್ರೋಹ ಕೃತ್ಯ ಎಸಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಇಂಥ ಹೇಳಿಕೆ ಕೋಮು ಗಲಭೆಗಳಿಗೆ ಅವಕಾಶ ಕಲ್ಪಿಸುತ್ತಿದೆ. ಸಂವಿಧಾನದ ಅಡಿಯಲ್ಲಿ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡ ಕೇಂದ್ರ ಗೃಹಸಚಿವ ಈ ರೀತಿ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದು, ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ದಲಿತರಪರ ಹೋರಾಟಗಾರರ ಆಗ್ರಹ

“ದೇಶದಲ್ಲಿ ಹಿಂದೂ ಕೋಡ್ ಬಿಲ್ ಜಾರಿಗೆ ತಂದು ದೇಶದ ಎಲ್ಲ ಮಹಿಳೆಯರಿಗೆ ಸಮಾನ ಅವಕಾಶ ಮಾಡಿಕೊಡಲಾಗಿದೆ. ಅಂಬೇಡ್ಕರ್ ನಮಗೆ ನಿತ್ಯ ಸ್ಮರಣೆ. ಅವರನ್ನು ಈ ದೇಶದ ಪ್ರತಿ ಪ್ರಜೆಯೂ ಮರೆಯುವಂತಿಲ್ಲ” ಎಂದರು.

ಈ ಸಂದರ್ಭದಲ್ಲಿ ಈರಮ್ಮ, ಲಲಿತಾ ಆರೋಲೀ ಕರ್, ಅರ್ಚನಾ ಸುಂಕಾರಿ, ಸುಜಾತಾ ದಾದಾಸ್, ನಾಗರತ್ನ, ಲಕ್ಷ್ಮಿ, ಸಾವಿತ್ರಿ, ಪ್ರಿಯದರ್ಶಿನಿ ನಂದಿನಿ, ಮೀನಾಕ್ಷಿ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X