ರಾಯಚೂರು | ಚರಂಡಿ ,ಬೋರವೆಲ್ ದುರಸ್ತಿಗೆ ಕೆ ಆರ್ ಎಸ್ ಆಗ್ರಹ

Date:

Advertisements

ಲಿಂಗಸುಗೂರು ನಗರದ ಚರಂಡಿಗಳಲ್ಲಿ ಕಸ ಕಡ್ಡಿ ಜಮಾವನೆಗೊಂಡು ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ರಾಷ್ಟ್ರ ಸಮಿತಿ ಪಕ್ಷ ತಾಲ್ಲೂಕು ಘಟಕ ವತಿಯಿಂದ ಒತ್ತಾಯಿಸಿದರು.

ನಗರದ ಚರಂಡಿಗಳನ್ನು ಎರಡ್ಮೂರು ತಿಂಗಳು ಕಳೆದರೂ ಪುರಸಭೆ ಇಲಾಖೆಯವರು ಸ್ವಚ್ಛಗೊಳಿಸಿಲ್ಲ. ಇದರಿಂದ ಕಸ್ ಕಡ್ಡಿ ಜಮಾವಾಗಿ ಚರಂಡಿಯಿಂದ ಮೇಲೇಕ್ಕೆ ನೀರು ಹರಿಯುತ್ತಿವೆ ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ ಎಂದು ಆಗ್ರಹಿಸಿದರು.

ನಗರದ ವಾರ್ಡ್ ನಂಬರ್ 07 ಅಮರೇಗೌಡ ಆಸ್ಪತ್ರೆ ಹಿಂದುಗಡೆ ಇರುವ ಸಾರ್ವಜನಿಕ ಉದ್ಯಾನವನದ ಬೋರವೆಲ್ ಮತ್ತು ವಾರ್ಡ್ ನಂಬರ್ 10, ಡೋಹರ ಓಣಿ ಬನ್ನಿ ಕಟ್ಟೆ ಮುಂದೆ ಇರುವಂತಹ ಸಾರ್ವಜನಿಕ ಬೋರವೆಲ್ ಗಳು ಕೆಟ್ಟು ಹೋಗಿ 8 ತಿಂಗಳು ಕಳೆದರೂ ದುರಸ್ತಿ ಮಾಡಿಲ್ಲ ಎಂದು ಆರೋಪಿಸಿದರು.

Advertisements

ಹಿಂದೆಯೂ ಬೋರ್ವೆಲ್ ಗಳ ಬಗ್ಗೆ ಮನವಿ ಮಾಡಿದರು ತಮಗೆ ಸಂಬಂಧವಿಲ್ಲದಂತೆ ಸ್ಪಂದಿಸುತ್ತಿದ್ದಾರೆ.ಕೂಡಲೇ ಬಗೆಹರಿಸಬೇಕು ಎಂದು ಪುರಸಭೆ ಇಲಾಖೆಗೆ ಮನವಿ ಸಲ್ಲಿಸಿದರು. ಹೇಳಿದ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವರದಿ ಮಾಡಲು ತೆರಳಿದ ಪತ್ರಕರ್ತನ ಮೇಲೆ ಡಿವೈಎಸ್ ಪಿ ಹಲ್ಲೆ ; ಎಸ್ ಪಿಗೆ ದೂರು

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಪೋಳ, SC/ST ಘಟಕ ರಾಜ್ಯ ಕಾರ್ಯದರ್ಶಿ ಬಸವ ಪ್ರಭು,ರಾಜ್ಯ ಪ್ರಧಾನ ಕಾರ್ಯದರ್ಶಿ ನಿರುಪಾದಿ ಗೋಮಾರ್ಸಿ, ವಿಶ್ವನಾಥ್ ನಾಯ್ಡು, ಮಲ್ಲಿಕಾರ್ಜುನ್ ಪೂಜಾರಿ ಇನ್ನಿತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X