ರಾಯಚೂರು | ಎಡೆದೊರೆ ನಾಡು ಜಿಲ್ಲಾ ಉತ್ಸವದ ಅಂಗವಾಗಿ ಫೆ.2 & 3 ರಂದು ಮಕ್ಕಳ ಹಬ್ಬ; ಕೃಷ್ಣ ಶಾವಂತಗೇರಾ

Date:

ಎಡೆದೊರೆ ನಾಡು ಜಿಲ್ಲಾ ಉತ್ಸವದ ಅಂಗವಾಗಿ ಫೆಬ್ರವರಿ ೨ ಮತ್ತು ೩ ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಸದಸ್ಯ ಕೃಷ್ಣ ಶಾವಂತಗೇರಾ ತಿಳಿಸಿದರು.

- Advertisement -

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಮಕ್ಕಳ ಹಬ್ಬಕ್ಕೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದ ಐದು ವಾಹನಗಳ ಮೂಲಕ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಫೆ. ೨ ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಕ್ಕಳ ಹಬ್ಬಕ್ಕೆ ಚಾಲನೆ ನೀಡಲಿದ್ದು, ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿವಿಧ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಕ್ಕಳ ಹಬ್ಬದ ಅಂಗವಾಗಿ ರೋಬೋಟಿಕ್ ಶೋ, ಕುದ್ರೋಳಿ ಗಣೇಶ ಅವರಿಂದ ಜಾದೂ ಪ್ರದರ್ಶನ ನಡೆಯಲಿದ್ದು, ನಾಲ್ಕು ಹಂತಗಳಲ್ಲಿ ಮುಖವಾಡ ತಯಾರಿ, ಗೂಡುದೀಪ, ಮಣ್ಣಿನ ಮೂರ್ತಿ ನಿರ್ಮಾಣ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಸಂಜೆ ನಾಲ್ಕು ಗಂಟೆಗೆ ಮಾವಿನ ಕೆರೆ ಬಳಿ ಕೆರೆ ಹಬ್ಬ ನಡೆಯಲಿದ್ದು, ಪಟಾಕಿ ಹಾರಾಟ, ಗಾಳಿಪಟ ಪ್ರದರ್ಶನಗಳು ನಡೆಯಲಿವೆ ಎಂದು ತಿಳಿಸಿದರು.

ಇದಲ್ಲದೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯಗಳು, ಆಟೋಟಗಳು ನಡೆಯಲಿದ್ದು, ಅಶೋಕ ಪಳಲಿ ಅವರಿಂದ ಕೋಳಿ ನೃತ್ಯ ಹಾಗೂ ವರ್ಚುವಲ್ ಶೋಗಳಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸಹಕಾರದೊಂದಿಗೆ ಎರಡು ದಿನಗಳ ಕಾಲ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಮಕ್ಕಳು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕತ್ತು ಕೊಯ್ದು ಸೊಸೆಯನ್ನು ಕೊಂದ ಮಾವ

ಈ ಸಂದರ್ಬದಲ್ಲಿ ಡಯಟ್ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಹಕ್, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಕೇಶವರೆಡ್ಡಿ, ರಾಜಾ ಶ್ರೀನಿವಾಸ, ಎಸ್.ಕೆ.ನಾಗಿರೆಡ್ಡಿ, ಶೇಖರ ರಾಂಪೂರ, ರವಿ ಮನ್ಸಲಾಪುರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...