ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

Date:

Advertisements

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ, ಹಾದಿ ಕಾಲೋನಿ ಹಾಗೂ ಶಾಂತಿ ಕಾಲೋನಿಗಳ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಯಿತು.

ಸುಮಾರು 3.00 ಕೋಟಿ ರೂಪಾಯಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯ ಅನುದಾನದಡಿ ಕೈಗೊಳ್ಳಲಾಗಿರುವ ಈ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಮತ್ತು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಿವರಾಜ ಪಾಟೀಲ್ ಭಾನುವಾರ ಅಡಿಗಲ್ಲು ಇಟ್ಟರು.

ಕಾಮಗಾರಿ ಉದ್ಘಾಟಿಸಿ ಮಾತನಾಡಿದ ಎ.ವಸಂತಕುಮಾರ ಅವರು ರಾಯಚೂರು ನಗರದಲ್ಲಿ ಹಲವಾರು ಬಡಾವಣೆಗಳು ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿವೆ. ಆದ್ದರಿಂದ‌ ಹಂತ ಹಂತವಾಗಿ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.

ಸದರಿ ಬಡಾವಣೆಗಳಲ್ಲಿ ದಶಕಗಳಿಂದ ಮೂಲಭೂತ ಸೌಕರ್ಯಗಳಿಲ್ಲದೇ ಜನತೆ ಸಂಕಷ್ಟ ಅನುಭವಿಸುತ್ತಿರುವುದನ್ನು ಪರಿಶೀಲಿಸಿ ಸರಕಾರದಿಂದ ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 3.00 ಕೋಟಿ‌ ರೂ ಅನುದಾನ ಮಂಜೂರು ಮಾಡಿ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು. ಇನ್ನು ಸ್ಥಳೀಯವಾಗಿ ಮತಗಟ್ಟೆ ಕೇಂದ್ರ ಸ್ಥಾಪನೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆಗಳನ್ನೂ ಸಹ ಆದಷ್ಟು ಬೇಗ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶು ಪತ್ತೆ : ಜಿಲ್ಲೆಯಲ್ಲಿ ಮೂರು ಪ್ರಕರಣಗಳು

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಾ.ರಝಾಕ ಉಸ್ತಾದ, ನಗರಸಭೆ ಸದ್ಯರಾದ ತಮ್ಮಪ್ಪ ನಾಯಕ, ಬಸವರಾಜ ದರೂರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಮ, ಮೊಹಮ್ಮದ ಉಸ್ಮಾನ, ಮುರಳಿ ಯಾದವ, ಶ್ರಿನಿವಾಸ ಶಿಂದೆ, ಅಂಜಿನಯ್ಯ ಹಾಗೂ ಸ್ಥಳಿಯ ನಿವಾಸಿಗಳು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X