ರಾಯಚೂರು | ಸರ್ಕಾರಿ ಹುದ್ದೆಗಾಗಿ ನಗರಸಭಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

Date:

ಸರಕಾರಿ ಹುದ್ದೆಗಾಗಿ ಸತತ ಪ್ರಯತ್ನದಲ್ಲಿರುವ ಹಿನ್ನಲೆಯಲ್ಲಿ ಇಂಜಿನಿಯರ ನೇಮಕಾತಿಯ ಅಂತಿಮ ಪಟ್ಟಿಯಲ್ಲಿ ಹೆಸರು ಬಂದ ಕಾರಣಕ್ಕೆ ಸಿಂಧನೂರು ನಗರಸಭಾಧ್ಯಕ್ಷೆ ಸ್ಥಾನಕ್ಕೆ ಪ್ರಿಯಾಂಕ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ನಗರಸಭೆ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿದ್ದರಿಂದ ಏಕಮಾತ್ರ ಸದಸ್ಯೆಯಾಗಿರುವ ಪ್ರಿಯಾಂಕ ರೋಹಿತ್ ಅವರು ಫೆ. 13ರಂದು ನಗರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರೂ, ಕಾಂಗ್ರೆಸ್ ಬೆಂಬಲದೊಂದಿಗೆ ಅಧ್ಯಕ್ಷ ಗಾದಿ ಅಲಂಕರಿಸಿದ್ದರು.ಆದರೆ ಇದೀಗ ಸರ್ಕಾರಿ ಹುದ್ದೆ ಅವರಿಗೆ ಒಲಿದು ಬಂದ ಹಿನ್ನಲೆಯಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಜಿಲ್ಲಾಧಿಕಾರಿಗಳಿಗೆ ಪತ್ರ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಂತ್ರಾಲಯ ಪ್ರವಾಸಕ್ಕೆಂದು ತೆರಳಿದ್ದ ಯುವಕರಿಬ್ಬರು ನೀರುಪಾಲು

ಪ್ರಿಯಾಂಕ ಅವರು 2017ರಲ್ಲಿ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದರು. ಇದೀಗ ಆ ಹುದ್ದೆಯ ನೇಮಕಾತಿಯ ಆದೇಶದಲ್ಲಿ ಅವರ ಹೆಸರು ಬಂದಿದ್ದು, ಆ ಹಿನ್ನಲೆಯಲ್ಲಿ ಸರ್ಕಾರಿ ಹುದ್ದೆಗಾಗಿ ನಗರಸಭೆ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ವಿಶೇಷವಾಗಿದೆ.

ನಗರಸಭೆ ಆಡಳಿತ ಮಂಡಳಿ‌‌ ಮುನ್ನಡೆಸಲು ಉಪಾಧ್ಯಕ್ಷೆಯಾಗಿರುವ ಮಂಜುಳಾ ಪ್ರಭುರಾಜ್ ಅವರಿಗೆ ಹಂಗಾಮಿ ಅಧ್ಯಕ್ಷ ಸ್ಥಾನ ಸಿಗಬಹುದು ಎಂದು ಕೇಳಿ ಬರುತ್ತಿದೆ.ಆಡಳಿತ ಮಂಡಳಿಯ ಅಧಿಕಾರವಧಿ 6 ತಿಂಗಳು ಬಾಕಿ ಉಳಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...