‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

Date:

Advertisements

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ. ವರಿಷ್ಠ ನಾಯಕರನ್ನು ಭೇಟಿ ಮಾಡಿ, ಟಿಕೆಟ್‌ಗೆ ಮನವಿ ಮಾಡಿದ್ದೇನೆ. ಅನೇಕ ನಾಯಕರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಜಿ ಸಂಸದ, ಬಿಜೆಪಿ ಮುಖಂಡ ಬಿ.ವಿ ನಾಯಕ ತಿಳಿಸಿದರು.

ರಾಯಚೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಲ್ಲಿದ್ದ ನಾನು ಅನೇಕ ಕಾರಣದಿಂದ ಪಕ್ಷ ತೊರೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾನ್ವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದೇನೆ. ನನಗೆ ಪಕ್ಷಾತೀತವಾಗಿ ಅನೇಕ ಅಭಿಮಾನಿಗಳಿದ್ದು ಅವರ ಅಭಿಲಾಷೆಯಂತೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿಲು ಟಿಕೆಟ್‌ಗಾಗಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೇನೆ. ಕೇಂದ್ರದಲ್ಲಿ ಈ ಬಾರಿ ಪುನಃ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ನನಗೆ ಟಿಕೆಟ್ ನೀಡದಿದ್ದರು ವರಿಷ್ಠರ ನಿರ್ಧಾರಕ್ಕೆ ಬದ್ದನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದು, ಆಗ ಮೋದಿಯ ಅಲೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲುವು ಸಾಧಿಸಿದ್ದರು. ಈಗಲೋ ಮೋದಿ ಅಲೆಯಿದೆ. ವಿಶ್ವಮಟ್ಟದ ನಾಯಕರಾಗಿ ನರೇಂದ್ರ ಮೋದಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

Advertisements

ರಾಜಕೀಯ ನೆಲೆ ಕಂಡುಕೊಳ್ಳಲು ಪಕ್ಷ ಬದಲಾವಣೆ ಮಾಡಿದ್ದೇನೆ. ನನಗೆ ದೇವದುರ್ಗ, ರಾಯಚೂರು, ಶಹಪುರ, ಮಾನ್ವಿಯಲ್ಲಿ ದೊಡ್ಡ ಅಭಿಮಾನ ಬಳಗವಿದೆ. ನಾನು ಸಂಸದನಾಗಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ಅನುದಾನ, ಕಾಡಾ ಕಚೇರಿ ಸ್ಥಾಪನೆ, ರಾಯಚೂರು ರಸ್ತೆ ಸುಧಾರಣೆಗೆ ಅನುದಾನ ತಂದಿದ್ದೇನೆ. ಹೀಗೆ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಟಿಕೆಟ್ ನೀಡಿದರೆ ಗೆಲುವು ಸಾಧಿಸುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವೇಳೆ ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್, ಮಲ್ಲಿಕಾರ್ಜುನ, ಶರಣಪ್ಪ ಗೌಡ, ಅಯ್ಯಪ್ಪ ಮ್ಯಾಕಲ್, ಜೆ.ಸುಧಾಕರ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X