ರಾಯಚೂರು | ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಆಗ್ರಹ

Date:

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಮತ್ತು ಕೆಇಆರ್‌ಸಿ ಹಾಗೂ ಕರ್ನಾಟಕ ವಿದ್ಯುತ್ ನಿಗಮಗಳು ವಿದ್ಯುತ್ ಶುಲ್ಕ ಹೆಚ್ಚಿಸಿರುವುನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಲಾಯಿತು.

- Advertisement -

“ಹತ್ತಿ ಗಿರಣಿದಾರರಿಗೆ ಕೃಷಿ ಮಾರುಕಟ್ಟೆಯ ಯಾವುದೇ ಸೌಕರ್ಯದ ಬಳಕೆ ಅವಶ್ಯಕತೆ ಇಲ್ಲವಾದ್ದರಿಂದ ಹತ್ತಿ ಗಿರಣಿ  ಉದ್ದಿಮೆದಾರರನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಬೇಕು” ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದ ರೈತರಿಗೆ ಮತ್ತು ಸಣ್ಣ ಕೈಗಾರಿಕೆಗಳಾದ ಹತ್ತಿ ಗಿರಣಿಗಳ ಹಿತಾಸಕ್ತಿಗೆ ಪ್ರತಿಕೂಲವಾಗಿದ್ದಲ್ಲಿ ಹತ್ತಿಗಿರಣಿಗಳು ಕಾರ್ಯನಿರ್ವಹಿಸದೇ ಸ್ಥಗಿತಗೊಳ್ಳುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ.  ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಚರ್ಚಿಸಲು ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೊದಲು ಸರ್ಕಾರದೊಂದಿಗೆ ಚರ್ಚಿಸಲು ಅವಕಾಶ ಕಲ್ಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕೋವಿಡ್‌ನಿಂದಾಗಿ ಸಾಕಷ್ಟು ಇಂಡಸ್ಟ್ರಿಗಳಲ್ಲಿ ಉತ್ಪಾದನಾ ಚಟುವಟಿಕೆಗಳಿಲ್ಲದೆ ಬ್ಯಾಂಕ್‌ ಸಾಲ ಕಟ್ಟಲಾಗದೇ ಕೈಗಾರಿಕೋದ್ಯಮಿಗಳು ಬಹಳಷ್ಟು ತೊಂದರೆಗಳನ್ನು ಅನುಭವಿಸಿದ್ದು, ಸಾಕಷ್ಟು ನಷ್ಟ ಎದುರಿಸುವಂತಾಗಿದೆ. ಇದರಿಂದ ಹೊರಬರಲು ಬಹಳಷ್ಟು ಕಷ್ಟವಾಗಿದೆ” ಎಂದು ಅವಲತ್ತುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 25 ಪೊಲೀಸರ ವರ್ಗಾವಣೆ ಕೋರಿ ಐಜಿಪಿಗೆ ಶಾಸಕ ಬಸವರಾಜ ರಾಯರೆಡ್ಡಿ ಪತ್ರ: ವರ್ಗಾವಣೆ ದಂಧೆ ಆರೋಪ

ಕೆಇಆರ್‌ಸಿ ಹಾಗೂ ಕರ್ನಾಟಕ ವಿದ್ಯುತ್ ನಿಗಮಗಳ ವತಿಯಿಂದ ವಿದ್ಯುತ್ ಬಿಲ್‌ಗಳ ದರಗಳನ್ನು ಹೆಚ್ಚಳ ಮಾಡಿದ್ದು, ಕೈಗಾರಿಕೋದ್ಯಮಗಳಿಗೆ ಹೊರೆಯಾಗಿದ್ದು, ಕೈಗಾರಿಕೆ ನಡೆಸುವುದು ಕಷ್ಟವಾಗಿದೆ. ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೂಡಲೇ ವಿದ್ಯುತ್ ದರ ಇಳಿಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ, ಗೌರವ ಕಾರ್ಯದರ್ಶಿ ಶೈಲೇಶ್‌ಕುಮಾರ ದೋಖಾ, ಗಂಗಾಧರ, ಗೋಪಾಲ, ನಾಗನಗೌಡ ಹರವಿ ಮಂಜುನಾಥ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...