ರಾಯಚೂರು | ಬೆಲೆ ಏರಿಕೆ ವಿರುದ್ಧ ಸಿಪಿಐಎಂಎಲ್ ಪ್ರತಿಭಟನೆ

Date:

Advertisements

ಕೇಂದ್ರದ ಎನ್‌ಡಿಎ ಒಕ್ಕೂಟ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಸಿಪಿಐಎಂಎಲ್ ಲಿಬರೇಷನ್ ರಾಯಚೂರು ತಾಲೂಕು ಘಟಕ ಪ್ರತಿಭಟನೆ ನಡೆಸಿತು.

ನಿರಂತರ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಎರಡೂ ಸರ್ಕಾರಗಳು ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನಾನು ಮೇಲು ನೀನು ಮೇಲೆಂದು ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸತ್ತಿದ್ದಾರೆ ಎಂದು ಸಂಘಟನೆಯ ಮುಖಂಡರು ಕಿಡಿಕಾರಿದರು.

Advertisements

“ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ. ಜೊತೆಗೆ, ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯು ಈ ಕೋಮು ಮತ್ತು ಸಾಂವಿಧಾನಿಕ ವಿರೋಧಿಯಾಗಿದೆ. ಈ ಶಾಸನವು ಸ್ಪಷ್ಟವಾಗಿ ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ಸಂವಿಧಾನವು ಖಾತರಿಪಡಿಸಿದಂತೆ ಮುಸ್ಲಿಂ ಸಮುದಾಯ ಮತ್ತು ಅವರ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನೇರ ದಾಳಿಯಾಗಿದೆ. ಈ ಮಸೂದೆಯು ಧರ್ಮಾಂಧ ಕಾನೂನು ರಚನೆಯ ಸ್ಪಷ್ಟ ಕೃತ್ಯವಾಗಿದೆ. ನ್ಯಾ. ರಾಜಿಂದರ್ ಸಾಚಾರ್ ಸಮಿತಿಯ 2006ರ ವರದಿಯು ವಕ್ಫ್‌ಗಳನ್ನು ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿರುವ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಾಗಿ ಗುರುತಿಸಿತು ಮತ್ತು ಸಾಕಷ್ಟು ಆರ್ಥಿಕ ಮತ್ತು ಕಾನೂನು ಬೆಂಬಲದೊಂದಿಗೆ ವಕ್ಫ್ ಮಂಡಳಿಗಳನ್ನು ಆಡಳಿತಾತ್ಮಕವಾಗಿ ಬಲಪಡಿಸುವ ಅಗತ್ಯವನ್ನು ಎತ್ತಿ ತೋರಿಸಿತು. ಇದಕ್ಕೆ ತದ್ವಿರುದ್ಧವಾಗಿ, ಪ್ರಸ್ತಾವಿತ ಮಸೂದೆಯು ಹಿಂದುತ್ವದ ರಾಜಕೀಯ ಸಿದ್ಧಾಂತವನ್ನು ಕಾನೂನಿನಲ್ಲಿ ಎನ್ಕೋಡ್ ಮಾಡಲು ಪ್ರಯತ್ನಿಸುತ್ತದೆ. ಈ ಕೊಡಲೇ ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕೆಂದು” ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿಪಿಐಎಂಎಲ್ ಲಿಬರೇಶನ್ ತಾಲೂಕು ಮುಖಂಡ ಬಸವರಾಜ ಕೊಂಡೆ, ಆರ್.ಎಚ್ ಕಲಮಂಗಿ, ಶ್ರೀನಿವಾಸ ಬುಕ್ಕನ್ನಟ್ಟಿ, ಅಜು, ಸಾದಿಕ್, ಹುಸೇನ್, ರಹೀಮ್ ಬಸವರಾಜ ಅರಳಹಳ್ಳಿ, ಹುಸೇನಪ್ಪ, ರಮೇಶ್, ಯಮನೂರಪ್ಪ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X