ರಾಯಚೂರು | ಅಯೋಧ್ಯೆಯ ದಲಿತ ಯುವತಿ ಹತ್ಯೆ; ಕಠಿಣ ಕ್ರಮಕ್ಕೆ ಮಾದಿಗ ಹೋರಾಟ ಸಮಿತಿ ಒತ್ತಾಯ

Date:

Advertisements

ಉತ್ತರ ಪ್ರದೇಶದ ಅಯೋಧ್ಯೆಯ ಸಹ್ನವಾ ಗ್ರಾಮದ ಹೊರವಲಯದಲ್ಲಿ ಇಪ್ಪತ್ತಾರು ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿತು.

ಪೊಲೀಸರ ಮಾಹಿತಿ ಪ್ರಕಾರ ಯುವತಿಯ ಮೃತದೇಹದ ಕಾಲುಗಳು ಮುರಿದಿದ್ದು, ಕಣ್ಣುಗಳನ್ನು ಕಿತ್ತು ಹಾಕಿಲಾಗಿತ್ತು. ಇಂತಹ ಹೇಯ ಕೃತ್ಯಗಳು ಪದೇ ಪದೆ ಸಂಭವಿಸಿದರೂ ಸರ್ಕಾರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 76 ವರ್ಷ ಗತಿಸಿದರು.. ಇದುವರೆಗೆ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ, ಕೊಲೆ ಸುಲಿಗೆಗಳಿಗೆ ಕಡಿವಾಣ ಬಿದ್ದಿಲ್ಲ. ವರ್ಷದಿಂದ ವರ್ಷಕ್ಕೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆಯೇ ವಿನಃ ಕ್ರಮ ತೆಗೆದುಕೊಂಡಿರುವುದು ಬೆರಳೆಣಿಕೆಯಷ್ಟು ಮಾತ್ರ. ಕೇಂದ್ರ ಗೃಹ ಮಂತ್ರಿಯವರು ಈ ಘಟನೆ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಲು ಪೊಲೀಸ್ ಇಲಾಖೆಗೆ ಸೂಚಿಸಬೇಕು. ಅತ್ಯಾಚಾರ ಮಾಡಿದ ಕಾಮುಕರನ್ನು ತಕ್ಷಣ ಗುಂಡಿಕ್ಕಿ ಕೊಲ್ಲುವಂತೆ ಕೇಂದ್ರ ಸಚಿವ ಸಂಪುಟದಲ್ಲಿ ಕಾನೂನು ಜಾರಿಗೊಳಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಂದೆ ಇಂತಹ ಕೃತ್ಯ ನಡೆಯದಂತೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಸಮಿತಿ ಒತ್ತಾಯಿಸಿತು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

Advertisements

ಈ ವೇಳೆ ಸಮಿತಿ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪುರಿ, ಬಸವರಾಜ್ ಜಯಂ, ಲಕ್ಷ್ಮಣ ಮಸರಕಲ್, ಆಂಜನೇಯ ಟೊಣ್ಣೂರು, ಮಹಾದೇವ, ವಿಜಯಕುಮಾರ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X