ರಾಯಚೂರು | ದಲಿತರಿಗೆ ಭೂಮಿ,ವಸತಿ ಹಕ್ಕುಪತ್ರ ನೀಡಲು ಒತ್ತಾಯ

Date:

Advertisements

ಸಿಂಧನೂರು ನಗರದಲ್ಲಿ ನಿವೇಶಗಳನ್ನು ಹಂಚಲು ಖರೀದಿ ಮಾಡಿರುವ ಜಾಗದಲ್ಲಿ ದಲಿತರಿಗೆ ಮತ್ತು ಅತೀ ಕಡುಬಡವರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಲು ಸೇರಿ ಇತರೆ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಆರಣ್ಯಭೂಮಿ, ಸಾಮಾಜಿಕ ಅರಣ್ಯಕರಣ,ಗೋವುಗಳ ಗೋಮಾಳಗಳಿಗೆ ಕಾಯ್ದಿಸಿರುವ ನೆಪದಲ್ಲಿ ದಲಿತರನ್ನು ಒಕ್ಕಲೆಬ್ಬಿಸುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಗಳ ಸ್ಥಾಪನೆಗಾಗಿ ವಿದೇಶಿ ಬಂಡವಾಳಗಾರರ ಕೈ ವಶ ಕುತಂತ್ರವಾಗಿದೆ ಎಂದರು.

ಫಾರಂ ಸಂಖ್ಯೆ 54, 53, 57 ರಲ್ಲಿ ಸಲ್ಲಿಸಿರುವ ದಲಿತರು ಹಾಗೂ ತಳ ಸಮುದಾಯಗಳ ಅರ್ಜಿಗಳನ್ನು ಪರಿಶೀಲನೆವಿಲ್ಲದೆ ರಾಶಿಗಟ್ಟಲೆ ಕೊಳೆಯುತ್ತಾ ಬಿದ್ದಿವೆ. ಜಿ.ಪಿ.ಎಸ್. ಮೂಲಕ ಉಳುಮೆ ಮಾಡುತ್ತಿಲ್ಲವೆಂದು ಹೇಳಿ ಸಾವಿರಾರು ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಆರೋಪಿಸಿದರು.

1000153611



ಸಿಂಧನೂರು ನಗರದ 40 ನೇ ಕಾಲುವೆ ಮೇಲೆ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿರುವ ನಿವೇಶನ ಬಡವರಿಗೆ ಸರ್ಕಾರಿ ಜಾಗದಲ್ಲಿ ಪ್ಲಾಟಗಳನ್ನು ನೀಡಿ ಮನೆ ನಿರ್ಮಿಸಿ ಕೊಡಬೇಕು ಹಾಗೂ ಗೊರೇಬಾಳ ಹೋಬಳಿಯ ಚನ್ನಳ್ಳಿ ಗ್ರಾಮದ ಸ.ನಂ 222, ರಲ್ಲಿ 21 ಎಕರೆ ಭೂಮಿಯನ್ನು ದಲಿತರಿಗೆ ಹಂಚಬೇಕು ಎಂದು ಒತ್ತಾಯಿಸಿದರು.

ಹಕ್ಕಿಗಾಗಿ ಹಲವು ಬಾರಿ ಹೋರಾಟ ಮಾಡಲಾಗಿದೆ ಹೀಗೆ ನಿರ್ಲಕ್ಷ್ಯ ಮುಂದುವರಿದರೆ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಟೋಲ್ ಗೇಟ್ ತೆರವಿಗೆ ಶಾಸಕಿ ಕರೆಮ್ಮ ಆಗ್ರಹ

Advertisements

ಈ ವೇಳೆ ವಿಭಾಗೀಯ ಸಂಚಾಲಕರು ಚಿನ್ನಪ್ಪ ಹೆಡಗಿಬಾಳ, ಜಿಲ್ಲಾ ಸಂಚಾಲಕರು ಆರ್ ಅಂಬ್ರೋಸ,ಉಮೇಶ್, ಶಿವರಾಜ ಬಾಗಲವಾಡ,ಉಮೇಶ್,ಮಂಜು ರಾಯಚೂರು , ಹುಚ್ಚಪ್ಪ ಕವಿತಾಳ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X