ರಾಯಚೂರು | ಜೂನ್ 28,29 ಅಖಿಲ್ ಭಾರತ್ ದಲಿತ ಸಾಹಿತ್ಯ ಸಮ್ಮೇಳನ ; ತಾಯರಾಜ್

Date:

Advertisements

ಜೂನ್ 28,29 ರಂದು ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ದಲಿತ ಪರ ಹೋರಾಟಗಾರರು ,ವಿವಿಧ ಸಂಘ ಸಂಸ್ಥೆಗಳು ,ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಹಾಗೂ ಸಮ್ಮೇಳನದ ಸಮಿತಿಯ ಸದಸ್ಯರು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರು ಹಾಗು ಸಮ್ಮೇಳನ ಸಂಯೋಜಕರಾದ ತಾಯರಾಜ್ ಹೇಳಿದರು. 

ನಗರದ ಸರ್ಕಾರಿ ನೌಕರರ ಭವನದಲ್ಲಿ ಎರಡು ದಿನದ  ಸಮ್ಮೇಳನ ಕಾರ್ಯಕ್ರಮದ ಬಗ್ಗೆ ಪದಾಧಿಕಾರಿಗಳನ್ನು ಪೂರ್ವಭಾವಿ ಸಭೆ ಕರೆದು ಮಾತನಾಡಿದರು.

ರಾಯಚೂರು ಜಿಲ್ಲೆಯು ಚಳುವಳಿ,ಹೋರಾಟಗಾರರ ಕೇಂದ್ರ ಬಿಂದು ಎಂದು ಹೆಸರಾಗಿದೆ. ಹಲವು ವರ್ಷಗಳ ನಂತರ ಜಿಲ್ಲೆಯಲ್ಲಿ ನಡೆಯಲಿರುವ ದಲಿತ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಿ ಯಶಸ್ವಿಯಾಗುವುದಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.

Advertisements

ನಂತರ ಮಾತನಾಡಿದ ರಾಜ್ಯ ಮುಖಂಡ ಡಾ.ಅರ್ಜುನ ಗೊಳಸಂಗಿ ಸಭೆಯನ್ನು ಉದ್ದೇಶಿಸಿ ಸಮ್ಮೇಳನ ಸಲುವಾಗಿ ರಚಿಸಿದ ವಿವಿಧ ಸಮಿತಿಗಳ ಕಾರ್ಯ ಮತ್ತು ಆರ್ಥಿಕ ಕ್ರೋಢೀಕರಣ ಬಹುಮುಖ್ಯವಾಗಿರುತ್ತದೆ. ಸಮ್ಮೇಳನ ಯಶಸ್ವಿ ಆಗಬೇಕಾದರೆ ನಮ್ಮ ವೈಯಕ್ತಿಕ ಕೆಲಸಗಳನ್ನು  ಕೆಲವು ದಿನಗೋಸ್ಕರ ಬದಿಗೊತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಹಿರಿಯ ಮುಖಂಡರಿಗೆ ವಸತಿ ವ್ಯವಸ್ಥೆ ಸೇರಿದಂತೆ ಯಾವುದು ಲೋಪವಾಗದಂತೆ ಎಚ್ಚರ ವಹಿಸಿ ಅತಿಥೋಪಚಾರ ನೋಡಿಕೊಳ್ಳುವ ಜವಾಬ್ದಾರಿ ನಿಭಾಯಿಸಬೇಕು.ಎಲ್ಲಾ ಪದಾಧಿಕಾರಿಗಳು ಒಟ್ಟಿಗೆ ಕಾರ್ಯ ನಿರ್ವಹಣೆ ಮೂಲಕ ಸಮ್ಮೇಳನದ ಸಂದೇಶ ಸಾರೋಣ ಎಂದು ತಿಳಿಸಿದರು.

ಸಭೆಯಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ನರಸಿಂಹ ಭೈರವ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಧರ್ಮಾವತಿ ಎಸ್.ನಾಯಕ,ರಾಯಚೂರು ಯುವ ಘಟಕದ ಜಿಲ್ಲಾಧ್ಯಕ್ಷ ಪಾರ್ಥ ಸಿರವಾರ, ರಾಯಚೂರು ತಾಲೂಕು ಅಧ್ಯಕ್ಷ ನರಸಿಂಹಲು ಪಿ, ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮಿ , ಮಾನ್ವಿ ತಾಲ್ಲೂಕಿನ ಅಧ್ಯಕ್ಷ ಆರ್.ಕೆ ಈರಣ್ಣ, ಕಾರ್ಯದರ್ಶಿ ಡಾ.ಬಸವರಾಜ ಸುಂಕೇಶ್ವರ, ಲಿಂಗಸುಗೂರು ತಾಲ್ಲೂಕ ಅಧ್ಯಕ್ಷ ಅಮರೇಶ ವೆಂಕಟಪುರ ,ಕಾರ್ಯದರ್ಶಿ ಡಾ.ಮಹಾಂತಗೌಡ ಪಾಟೀಲ್, ಡಾ.ಪರಮಾನಂದ, ಲಿಂಗಸುಗೂರು ತಾಲ್ಲೂಕಿನ ಯುವ ಘಟಕದ ಅಧ್ಯಕ್ಷ ಸುರೇಶ್ ಹಟ್ಟಿ, ಮಲ್ಲಿಕಾರ್ಜುನ ಕಡೆಚೂರು, ಸಿಂಧನೂರು ತಾಲ್ಲೂಕು ಕಾರ್ಯದರ್ಶಿ ರಾಮಣ್ಣ ಹಿರೇಬೇರಿಗಿ, ಸದಸ್ಯರಾದ ಯಂಕಪ್ಪ ಪಿರಂಗಿ,ಈರಪ್ಪ ಕೊಂಬಿನ್,ಮಲ್ಲೇಶ್ ಭೈರವ ರಾಯಚೂರು ತಾಲೂಕ ದಲಿತ ವಿದ್ಯಾರ್ಥಿ ಪರಿಷತ್ತಿನ ಪಾಲರಾಜ್,ರವಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X