ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

Date:

Advertisements

ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ ಸಮಿತಿ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಕೊಪ್ಪಳ ಜಿಲ್ಲೆಯಾದ್ಯಂತ ಅಸೃಶ್ಯತೆ ಆಚರಣೆ, ಜಾತೀಯತೆ ಪ್ರಕರಣಗಳು ದಿನನಿತ್ಯ ಹೆಚ್ಚಾಗಿ ಕಂಡುಬರುತ್ತಿವೆ. ಇಂತಹ ಘಟನೆಗಳಿಗೆ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಪಾಲನೆ ಹೊರಡಿಸಿ ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದರು.

ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳು ಕಳೆದರೂ ಸಮಾಜದಲ್ಲಿ ದಲಿತ ಹೆಣ್ಣು ಮಕ್ಕಳ, ದಲಿತರ ಮೇಲೆ ನಿರಂತರ ಅತ್ಯಾಚಾರ, ದೌರ್ಜನ್ಯ , ಕೊಲೆ ಪದೇ ಪದೇ ನಡೆಯುತ್ತಿವೆ ಎಂದು ದೂರಿದರು.

Advertisements

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಹಾಲ ಗ್ರಾಮದಲ್ಲಿ ಕ್ಷೌರ ಮಾಡಲು ನಿರಾಕರಿಸಿ ಕ್ಷೌರ ಮಾಡುವ ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ಕೊಲೆಗೈದ ಘಟನೆ, ಇಡೀ ದೇಶ ಯಾವ ಕಡೆ ಸಾಗುತ್ತಿದೆ ಎಂಬುದರ ಸೂಚನೆ. ಹಾಗಾಗಿ, ಆರೋಪಿಗೆ ಗಲ್ಲುಶಿಕ್ಷೆಯಾಗುವಂತೆ ಮಾಡಬೇಕು. ಆ ಮೂಲಕ ಅಸೃಶ್ಯತೆ ಆಚರಣೆ ನಿಲ್ಲಬೇಕು. ಜೊತೆಗೆ ಯುವಕನ ಕುಟುಂಬಕ್ಕೆ 05 ಎಕರೆ ಜಮೀನನ್ನು ಸರ್ಕಾರವು ಪರಿಹಾರವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಜನ ಸಂಪರ್ಕ ಸಭೆ; ಎಸ್‌ಪಿ ಮಿಥುನ್ ಕುಮಾರ್ ಭಾಗಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ತಿಂಗಳು ಎಸ್ ಸಿ ಎಸ್ ಟಿ ದೌರ್ಜನ್ಯ ಎಂಬ ವಿಷಯದ ಸಭೆ ಕರೆದು ಜನರಿಗೆ ಜಾತಿ ತಾರತಮ್ಯದ ಮಾಡದಂತೆ ಜಾಗೃತಿ ಮೂಡಿಸಬೇಕು ಎಂದು ಮನವಿಯಲ್ಲಿ ಮಾಡಿದರು.

ಈ ವೇಳೆ ಕಲ್ಯಾಣ್ ಕರ್ನಾಟಕ ಮುಖಂಡರಾದ ಸದಾನಂದ ಮಾನ್ವಿ, ರಂಗಪ್ಪ ಅಸ್ಕಿಹಾಳ, ಜಿಲ್ಲಾಧ್ಯಕ್ಷ ಆನಂದ್ ಏಗನೂರು, ರಮೇಶ್ ಸಿರವಾರ, ರಾಜು ಆಶಾಪುರ, ಶಾಂತಕುಮಾರ್ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X