ರಾಯಚೂರು | ನವರಾತ್ರಿ ಹಬ್ಬದ ವೇಳೆ ದಲಿತರ ದೇವಾಲಯ ಪ್ರವೇಶ ತಡೆ – ಸ್ಥಳದಲ್ಲೇ ವಾಗ್ವಾದ

Date:

Advertisements

ರಾಯಚೂರು ತಾಲ್ಲೂಕು ಅತ್ಕೂರ ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ಅಂಬಾಭವಾನಿ ದೇವಾಲಯದಲ್ಲಿ ದಲಿತ ಸಮುದಾಯದವರು ಮಾಲೆ ಹಾಕಲು ತೆರಳಿದ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿ ಹಾಗೂ ಕೆಲವರು ತಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ವಾಗ್ವಾದ ಉಂಟಾಗಿದೆ.

ಸ್ಥಳೀಯ ಮೂಲಗಳ ಪ್ರಕಾರ, ದಸರಾ ನವರಾತ್ರಿ ಸಂದರ್ಭದಲ್ಲಿ ಗ್ರಾಮದಲ್ಲಿ ಎಲ್ಲಾ ಜಾತಿ ಸಮುದಾಯದ ಭಕ್ತರು ದೇವಾಲಯ ಪ್ರವೇಶಿಸಿ ಮಾಲೆ ಅರ್ಪಿಸುವುದು ದೀರ್ಘಕಾಲದ ಸಂಪ್ರದಾಯ. ಆದರೆ ದಲಿತರು ದೇವಾಲಯ ಪ್ರವೇಶಿಸಲು ಹೋದಾಗ ಅವರನ್ನು “ನೀವು ಒಳಬರಬಾರದು, ಹೊರಗಡೆಯಿಂದಲೇ ಮಾಲೆ ಹಾಕಬೇಕು” ಎಂದು ತಡೆದಿದ್ದಾರೆ.

ಈ ವಿಷಯವಾಗಿ ಗ್ರಾಮದ ನಿವಾಸಿ ರಮೇಶ್ ಮಾತನಾಡಿ, “ನಾವು ಮಾಲೆ ಹಾಕಲು ಹೋದಾಗ ಕೆಲವರು ತಡೆದರು. ನಮ್ಮ ತಾತನ ಕಾಲದಿಂದಲೇ ದಲಿತರಿಗೆ ಒಳಗಡೆ ಪ್ರವೇಶವಿಲ್ಲ, ನೀವು ಹಾಕಿದರೆ ನಾವು ಮಾಲೆ ತೆಗೆಯುತ್ತೇವೆ ಎಂದು ಹೇಳಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ : ರೈತ ಸಂಘಟನೆಯಿಂದ ಪ್ರತಿಭಟನೆ

ಗ್ರಾಮದ ಎಲ್ಲ ಸಮುದಾಯದ ಭಕ್ತರು ದೇವಾಲಯ ಪ್ರವೇಶಿಸಿ ಮಾಲೆ ಹಾಕಲು ಅವಕಾಶವಿದ್ದರೂ, ಮಾದಿಗ ಸಮುದಾಯದವರಿಗೆ ಮಾತ್ರ ಈ ಹಕ್ಕು ನಿರಾಕರಿಸಿರುವುದರಿಂದ ಸ್ಥಳೀಯ ದಲಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1000191788
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X