ರಾಯಚೂರಿನ ಈಶ್ವರ ನಗರದ ವೀರೇಶ ಎಂಬ ಯುವಕ ಪೊಲೀಸರ ತೀವ್ರ ಹಲ್ಲೆಯಿಂದ ಸಾವನ್ನಪ್ಪಿದ್ದ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು, ತನಿಖೆ ಆರಂಭಿಸಿದ ತಂಡ ನಗರಕ್ಕೆ ಆಗಮಿಸಿದೆ.
ವೀರೇಶನ ಸಾವು ಪ್ರಕರಣದ ತನಿಖೆ ನಿಸ್ಪಕ್ಷಪಾತ ನಡೆಸಬೇಕು ಎಂದು ವೀರೇಶ ಕುಟುಂಬ ನೀಡಿದ ದೂರಿನ ಅನ್ವಯ ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ ಇವರು ಸಿಐಡಿ ತನಿಖೆಗೆ ಶಿಫಾರಸು ಮಾಡಿರುವ ಹಿನ್ನಲೆ ತಂಡ ನಗರಕ್ಕೆ ಆಗಮಿಸಿದೆ.
ಡಿವೈಎಸ್ಪಿ ಮಾಲತೇಶ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನ ಭೇಟಿ ಮಾಡಿ ತಂಡ ಚರ್ಚೆ ನಡೆಸಿದೆ ಎನ್ನಲಾಗಿದೆ.
ವೀರೇಶ ಪತ್ನಿ ನರಸಮ್ಮರೊಂದಿಗೆ ಜಗಳವಾಡಿಕೊಂಡಿದ್ದ. ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪಶ್ಚಿಮ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿತ್ತು. ವಿಚಾರಣೆ ಹೆಸರಿನಲ್ಲಿ ಪಿಎಸ್ಐ ಮಂಜುನಾಥ ಹಾಗೂ ಸಿಪಿಐ ನಾಗರಾಜ ಮೇಕಾ ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದರಿಂದ ವೀರೇಶನ ಸಾವು ಸಂಭವಿಸಿದೆ ಎಂದು ಆರೋಪಿಸಿ ಮತ್ತೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ರಾಯಚೂರು | ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ
ಈಗಾಗಲೇ ಪ್ರಕರಣ ಸಂಬಂಧ ಪಿಎಸ್ಐ ಮಂಜುನಾಥ ಮತ್ತು ಸಿಪಿಐ ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.