ರಾಯಚೂರು | ವೈದ್ಯರ ನಿರ್ಲಕ್ಷ್ಯ ಆರೋಪ: ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿಕೆ

Date:

Advertisements

ಹೆರಿಗೆಯಾದ ಮೂರು ದಿನಗಳ ಬಳಿಕ ಬಾಣಂತಿಯೋರ್ವರು ರಕ್ತಸ್ರಾವದಿಂದ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ರಬ್ಬನ ಕಲ್ ಗ್ರಾಮದಲ್ಲಿ ನಡೆದಿದೆ.

ಈಶ್ವರಿ (32) ಮೃತಪಟ್ಟ ಮಹಿಳೆ ಎನ್ನಲಾಗಿದೆ. ಕಳೆದ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರು ತಾಲೂಕಿನ ಮಟಮಾರಿ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ತೀವ್ರ ರಕ್ತ ಸ್ರಾವದಿಂದ ಮೂರು ದಿನಗಳ ನಂತರ ಶುಕ್ರವಾರ ರಾತ್ರಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಮೃತ ಮಹಿಳೆಯ ಸಂಬಂಧಿ ಚರಣ್ ರಾಜ್ ಮಾತನಾಡಿ, ಹೆರಿಗೆ ನಂತರ ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಹೋದೆವು. ಮನೆಗೆ ಹೋದಾಗ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಮತ್ತೆ ಮಟಮಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಇಲ್ಲದೆ ಸಮಸ್ಯೆ ಎದುರಾಯಿತು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ತಿಳಿಸಿದರು.

Advertisements

ಜಿಲ್ಲಾಸ್ಪತ್ರೆಗೆ ದಾಖಲಾದಾಗ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ನಾವು ಏನು ಮಾಡೋಕೆ ಆಗಲ್ಲ ಎಂದು ಬರೆಸಿಕೊಂಡು ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಲ್ಲೇ ಪ್ರಾಣ ಬಿಟ್ಟರು. ಮಹಿಳೆಗೆ ಮೂರು ಮಕ್ಕಳಿದ್ದಾರೆ ಎಂದು ಹೇಳಿದರು.

ಮಟಮಾರಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣದಿಂದ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ರೋಗಿಗಳನ್ನು ತಮಗೆ ಸಂಬಂಧವಿಲ್ಲದಂತೆ ಇರುತ್ತಾರೆ. ತೀವ್ರ ಸಮಸ್ಯೆಯಿದೆ ಎಂದರೆ ಉಡಾಫೆಯ ಉತ್ತರ ನೀಡುತ್ತಾರೆ ಎಂದು ಮೃತ ಮಹಿಳೆಯ ಸಂಬಂಧಿ ಚರಣ್ ರಾಜ್ ಆರೋಪಿಸಿದರು.

ಈಶ್ವರಿ ಅವರ ಸಾವಿನೊಂದಿಗೆ ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸಾವು 5ಕ್ಕೆ ಏರಿದೆ. ಸಿಂಧನೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ 4 ಮೃತಪ್ಪಟ್ಟರೆ 1 ರಾಯಚೂರು ನಗರದಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ದುರ್ಘಟನೆ ರಾಯಚೂರಿಗೆ ಹರಡಿದೆ. ವೈದ್ಯರ ನಿರ್ಲಕ್ಷ್ಯದಿಂದ ಇನ್ನೆಷ್ಟು ಜೀವ ಬಲಿಯಾಗಬೇಕು ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X