ರಾಯಚೂರು | ವಿದ್ಯುತ್ ಉತ್ಪಾದನೆ ಕುಸಿತ; ಹೆಚ್ಚಿದ ಬೇಡಿಕೆ

Date:

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತವಾಗಿದ್ದು ಕಲ್ಲಿದ್ದಲು ಆಧಾರಿತ ಘಟಕಗಳು ಸೇರಿದಂತೆ ಇತರೆ ಮೂಲಗಳಿಂದಲೂ ವಿದ್ಯುತ್ ಉತ್ಪಾದನೆ ಇಳಿಕೆಯಾಗುತ್ತಿದೆ.

- Advertisement -

ರಾಯಚೂರು ಶಾಖೋತ್ಪನ್ನ ಕೇಂದ್ರದ ಐದು ಘಟಕಗಳು ಸ್ಥಗಿತಗೊಂಡಿದ್ದು‌, ಉಳಿದ ಮೂರು ಘಟಕಗಳಲ್ಲಿಯೂ ಉತ್ಪಾದನೆ ಇಳಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

1720 ಮೆ ವ್ಯಾ ವಿದ್ಯುತ್ ಸಾಮರ್ಥ್ಯವಿರುವ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ 160 ಮೆ ವ್ಯಾ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನೂ ವೈಟಿಪಿಎಸ್, ಬಿಟಿಪಿಎಸ್ ವಿದ್ಯುತ್ ಘಟಕಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಮಧ್ಯೆ ಮಳೆ ಕುಸಿತವಾದ ಪರಿಣಾಮ ಜಲಾಧಾರಿತ ಘಟಕಗಳು ಉತ್ಪಾದನೆ ನಿಲ್ಲಿಸಿವೆ.

ರಾಜ್ಯದಲ್ಲಿ 10 ಸಾವಿರ ಮೆ ವ್ಯಾ ವಿದ್ಯುತ್ ಬೇಡಿಕೆಯಿದ್ದು, ಉತ್ಪಾದನೆ ಮಾತ್ರ 2750 ಮೆ ವ್ಯಾ ಆಗುತ್ತಿದೆ. ಕೇಂದ್ರ ಗ್ರೀಡ್ ಹಾಗೂ ಸೋಲಾರ್ ಮೂಲದಿಂದ ವಿದ್ಯುತ್ ಲಭ್ಯವಾಗುತ್ತಿದೆ. ಬೇಡಿಕೆಗೆ ತಕ್ಕಂತೆ ಉತ್ಪಾದನೆ ಸಾಧ್ಯವಾಗದೇ ಇರುವದರಿಂದ ಪೂರೈಕೆಯನ್ನು ಸರಿದೂಗಿಸಲು ಸಮಸ್ಯೆ ಎದುರಾಗಿದೆ.

ಕಲ್ಲಿದ್ದಲು ಕೊರತೆ, ತಾಂತ್ರಿಕ ಸಮಸ್ಯೆಯಿಂದ ಹೊರ ಬಾರದ ಕಲ್ಲಿದ್ದಲು ಘಟಕಗಳು ನಿರಂತರ ವಿದ್ಯುತ್ ಉತ್ಪಾದನೆ ಸಮಸ್ಯೆ ಸುಳಿಗೆ ಸಿಲುಕಿದತಾಗಿದೆ. ರಾಜ್ಯ ಸರ್ಕಾರ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ.

“ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದೇ ಇರುವುದರಿಂದ ದುರಸ್ತಿ, ತಾಂತ್ರಿಕ ಸಮಸ್ಯೆ ಹೆಸರಿನಲ್ಲಿ ವಿದ್ಯುತ್ ಕಡಿತ ನಡೆಯುತ್ತಲೇ ಇದೆ. ಶಾಖೋತ್ಪನ್ನ ಘಟಕಗಳ ನಿರ್ವಹಣೆಯಲ್ಲಿ ಆಗುತ್ತಿರುವ ವಿಳಂಬದಿಂದಾಗಿ ಉತ್ಪಾದನೆಯಲ್ಲಿ ಇಳಿಕೆಯಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಗಟ್ಟಲು ಮುಂದಾಗಿ: ಆರ್.ಇಂದಿರಾ

ಸೋಲಾರ್, ಪವನ ಸೇರಿದಂತೆ ಇತರೆ ಮೂಲಗಳ ಉತ್ಪಾದನೆಯಿಂದ ಬೇಡಿಕೆ ಸಮತೋಲನ ಮಾಡಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ವಿದ್ಯುತ್ ಖರೀದಿ ಪ್ರಕ್ರಿಯೆಯೂ ಪ್ರಾರಂಭಗೊಂಡಿದೆ. ಯುಪಿಸಿಎಲ್, ಜಿಂದಾಲ್ ಸೇರಿದಂತೆ ಇತರೆ ಖಾಸಗಿ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ. ಜಲಾಶಯಗಳ ಸಂಗ್ರಹ ಕುಸಿಯುತ್ತಿದೆ. ಮಳೆಯಾದರೆ ಮಾತ್ರ ವಿದ್ಯುತ್ ಬೇಡಿಕೆ ಇಳಿಕೆಯಾಗುವ ಸಾಧ್ಯತೆಯಿದೆ.

ರಾಯಚೂರು ಜಿಲ್ಲಾ ಸಿಟಿಜನ್‌ ಜರ್ನಲಿಸ್ಟ್‌ ಹಫೀಜುಲ್ಲ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...