ರಾಯಚೂರು | ನಿವೇಶನ ಮತ್ತು ಮನೆ ಹಂಚಿಕೆಯಲ್ಲಿ ವಿಳಂಬ; ಜ.22ರಿಂದ ಆಹೋರಾತ್ರಿ ಧರಣಿ

Date:

Advertisements

ವಿಶೇಷ ವರ್ಗಗಳ (ಸ್ಪೇಷಲ್ ಕೆಟಗರಿ) ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜನವರಿ 22ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಯಚೂರು ಜಿಲ್ಲಾ ಸಂಚಾಲಕ ನರಸಿಂಹಲು ಹೇಳಿದರು.

ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ನಗರ ಸ್ಥಳೀಯ ಸಂಸ್ಥೆಗಳಿಂದ ನಾಲ್ಕೈದು ಬಾರಿ ಸಮೀಕ್ಷೆ ನಡೆಸಿದ್ದರೂ ಜಿಲ್ಲಾಧಿಕಾರಿಯವರು ಅನುಮೋದನೆ ನೀಡಿ ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ಶಿಫಾರಸು ಮಾಡುತ್ತಿಲ್ಲ. ಅನೇಕ ಬಾರಿ ಪ್ರತಿಭಟನೆ, ಮನವಿಗಳನ್ನು ನೀಡಿದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಸರ್ಕಾರದ ಇಂತಹ ನಿರ್ಲಕ್ಷ್ಯ ಖಂಡಿಸಿ ನಡೆಯಲಿರುವ ಅಹೋರಾತ್ರಿ ಹೋರಾಟದಲ್ಲಿ ಜಿಲ್ಲೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ” ಎಂದರು.

ದಲಿತ ಸಮರ ಸೇನೆ ಜಿಲ್ಲಾಧ್ಯಕ್ಷ ನೀಲಕಂಠ ಮಾತನಾಡಿ, “ನಿವೇಶನ ಮತ್ತು ವಸತಿ ನೀಡುವಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ನಾಲ್ಕು ಬಾರಿ ಸಮೀಕ್ಷೆ ನಡೆಸಲಾಗಿದೆ. 900 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಸಿಂಧನೂರು 237, ಲಿಂಗಸೂಗೂರು 188, ಮಾನ್ವಿ 163, ಸಿರವಾರ 218, ಕವಿತಾಳ 188 ಹಾಗೂ ಹಟ್ಟಿಯಲ್ಲಿ 74 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ವಚ್ಛತೆಗೆ ಆದ್ಯತೆ ನೀಡಿ: ಎನ್‌ಜಿಟಿ ಅಧ್ಯಕ್ಷ

“ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳನ್ನು ಕೇಳಿದರೆ ಉಡಾಫೆಯಾಗಿ ಮಾತನಾಡಿ, ಮಹಿಳೆಯರನ್ನು ಹೊರ ಕಳುಹಿಸುವಂತೆ ಹೇಳುತ್ತಿದ್ದಾರೆ. ಜಿಲ್ಲಾಧಿಕಾರಿಗೆ ಮನವಿ ನೀಡಿದರೂ ಕ್ರಮವಹಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನದಲ್ಲಿಯೂ ದೂರು ನೀಡಲಾಗಿದ್ದರಿಂದ ಸಚಿವರು ಸೂಚನೆ ನೀಡಿದ್ದಾರೆ. ಆದರೂ ಮನೆಗಳನ್ನು ನೀಡುತ್ತಿಲ್ಲ. ವಸತಿ ಸಚಿವರೂ ಕೂಡ ಪತ್ರ ಬರೆದಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಸ್ಪಂದಿಸದೇ ಇರುವುದನ್ನು ಖಂಡಿಸಿ ಆಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಈ ವೇಳೆ ಮೂರು ಸಾವಿರ ಮಂದಿ ಮಹಿಳೆಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಕರಿಯಪ್ಪ, ರಂಗಮ್ಮ, ಅನಿಲ್, ಶಂಕರ, ದುರ್ಗಮ್ಮ, ಮಹಿಬೂಬಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X