ರಾಯಚೂರು | ನೀರು ಪೂರೈಕೆಗೆ ಮೀನಾಮೇಷ; ಅತ್ತನೂರು ಗ್ರಾ. ಪಂಚಾಯಿತಿಗೆ ಮಹಿಳೆಯರಿಂದ ಮುತ್ತಿಗೆ

Date:

Advertisements

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮ ಪಂಚಾಯಿತಿ ಆಡಳಿತ ಮತ್ತು ಸಿಬ್ಬಂದಿ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಗ್ರಾಮದ ನಾಲ್ಕನೇ ವಾರ್ಡಿನ ಮಹಿಳೆಯರು ಸೋಮವಾರ ಖಾಲಿ ಕೊಡಗಳೊಂದಿಗೆ ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

“ಕೊಳವೆ ಬಾವಿ ಕೊರೆಸಿ ಹಲವು ದಿನ ಕಳೆದರೂ ಈವರೆಗೂ ಬಡಾವಣೆಯ ಮನೆಗಳಿಗೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ಕೊಡ ನೀರಿಗಾಗಿ ಮಕ್ಕಳು ಮತ್ತು ಮಹಿಳೆಯರು ಹಗಲು ರಾತ್ರಿ ಎನ್ನದೆ ನೀರು ಸಂಗ್ರಹ ಮಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮದ ನಾಲ್ಕನೇ ವಾರ್ಡಿನಲ್ಲಿರುವ ಸುಮಾರು 100ಕ್ಕೂ ಹೆಚ್ಚು ಮನೆಗಳಿಗೆ ನೀರಿನ ತೊಂದರೆ ಉಂಟಾಗಿದೆ. ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರೂ ಕೂಡಾ ಇಲ್ಲಿನ ನಿವಾಸಿಗಳ ಬೇಡಿಕೆ ಈಡೇರಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ” ಎಂದು ಪ್ರತಿಭಟನಕಾರರು ದೂರಿದರು.

Advertisements

ಸಿಬ್ಬಂದಿಗಳ ಹಿಂದೇಟು: ಗ್ರಾಮ ಪಂಚಾಯಿತಿ ಎದುರು ಮಹಿಳೆಯರು ಬಿರು ಬಿಸಿಲಿನಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಪ್ರತಿಭಟನೆ ನಡೆಸಿದರು. ಮಹಿಳೆಯರ ಮನವಿ ಸ್ವೀಕರಿಸಲು ಗ್ರಾಮ ಪಂಚಾಯಿತಿಯ ಯಾವೊಬ್ಬ ಸಿಬ್ಬಂದಿಯೂ ಮುಂದೆ ಬರಲಿಲ್ಲ. ನಿವಾಸಿಗಳ ಮನವಿ ತೆಗೆದುಕೊಳ್ಳಲು ಹಿಂದೇಟು ಹಾಕಿದ ಪ್ರಸಂಗ ಜರುಗಿತು. ಮಹಿಳೆಯರ ಒತ್ತಡಕ್ಕೆ ಮಣಿದ ಕರ ವಸೂಲಿಗಾರ ಅಯ್ಯಪ್ಪ ನಿವಾಸಿಗಳ ಮನವಿ ಸ್ವೀಕರಿಸಿದ್ದಾರೆ.

ಅತ್ತನೂರು ಗ್ರಾಮ ಪಂಚಾಯಿತಿ

ಪ್ರತಿಭಟನಾಕಾರರಿಂದ ಛೀಮಾರಿ: ಗ್ರಮ ಪಂಚಾಯಿತಿಯ ಸಿಬ್ಬಂದಿಗಳ ನಡೆಗೆ ಪ್ರತಿಭಟನಾನಿರತ ಮಹಿಳೆಯರು ಛೀಮಾರಿ ಹಾಕಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾತ್ರಿಯಿಡೀ ಸುರಿದ ಮಳೆಯಿಂದ ತೋಯ್ದ ಭತ್ತ; ಜನಜೀವನ ಅಸ್ತವ್ಯಸ್ಥ

ಈ ಸಂದರ್ಭದಲ್ಲಿ ಖಾಜಮ್ಮ, ಹಾಜರಾಬೀ, ಹುಸೇನ್ ಬೀ, ಖಾಜಮುನ್ನ, ಹುಸೇನಾ, ಜನ್ನತ್ ಬೀ, ಬಂದೇನವಾಜ್, ಮಹಿಬೂಬ್, ಭಾಷಾಸಾಬ್, ಹಮೀದ್, ಬಾವಸಲಿ, ಬಾಬು ಸೇರಿದಂತೆ ಬಹುತೇಕರು ಇದ್ದರು.

ವರದಿ : ಮಲ್ಲಿಕಾರ್ಜುನ ಅತ್ತನೂರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X