ರಾಯಚೂರು | ಲಂಚಕ್ಕೆ ಬೇಡಿಕೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ

Date:

Advertisements

ಮಾನ್ವಿ ತಾಲೂಕಿನ ವಸತಿ ನಿಲಯದ ಬಾಕಿ ಹಣವನ್ನು ಮಂಜೂರು ಮಾಡಲು ಕಟ್ಟಡದ ಮಾಲೀಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾನ್ವಿ ಪ್ರಭಾರಿ ಅಧಿಕಾರಿ ಸಂಗನಬಸಪ್ಪ ಬಿರಾದಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಯಚೂರು ಜಿಲ್ಲಾ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಇವರಿಗೆ ಮಾನ್ವಿಯ ಕಚೇರಿಯ ಪ್ರಭಾರ ಜವಾಬ್ದಾರಿ ನೀಡಲಾಗಿತ್ತು. ಮಾನ್ವಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಡೆಸಲು ಕಟ್ಟಡವೊಂದನ್ನು ಬಾಡಿಗೆ ಪಡೆಯಲಾಗಿತ್ತು. ತಿಂಗಳಿಗೆ ₹60 ಸಾವಿರ ಬಾಡಿಗೆಯಂತೆ 11 ತಿಂಗಳ ಬಾರಿಗೆ ಹಣ ಬಾಕಿ ಉಳಿದಿತ್ತು. ಆ ಹಣವನ್ನು ಮಂಜೂರು ಮಾಡಿಸಲು ಕಟ್ಟಡ ಮಾಲೀಕರಿಂದ ₹15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಕಟ್ಟಡ ಮಾಲೀಕ ತಿಪ್ಪಯ್ಯ ಶೆಟ್ಟಿ ಈ ಕುರಿತು ಮಂಗಳವಾರ ಲೋಕಾಯುಕ್ತರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಬುಧವಾರ ದಾಳಿ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

Advertisements

ಲೋಕಾಯುಕ್ತ ಎಸ್‍ಪಿ ಎಂ ಎನ್ ಶಶಿಧರ, ಇನ್ಸ್ ಪೆಕ್ಟರ್ ಗಳಾದ ಕಾಳಪ್ಪ ಬಡಿಗೇರ್, ರವಿ ಪುರುಷೋತ್ತಮ್, ಮುಖ್ಯಪೇದೆಗಳಾದ ಶಿವರಾಮ ಸ್ವಾಮಿ, ಏಕಾಂಬರನಾಥ, ಸಿಬ್ಬಂದಿಯಾದ ಗೋಪಾಲರಾವ್ ಪವಾರ್, ಅಶೋಕ, ರವಿ, ಬಸವರಾಜ್, ಬಸಯ್ಯ, ಗೋಪಾಲ್, ಶರಣಬಸವ, ಅಜಿತ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X