ರಾಯಚೂರು | ಈಶ್ವರಪ್ಪ ಪುತ್ರನಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

Date:

ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನಿರ್ಲಕ್ಷಿಸಿರುವುದು ಖಂಡನೀಯ. ಕೂಡಲೇ ಈಶ್ವರಪ್ಪನವರ ಪುತ್ರ ಕಾಂತೇಶಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಬೇಕು ಎಂದು ರಾಯಚೂರು ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಕೆ ಬಸವಂತಪ್ಪ ಹೇಳಿದರು.

- Advertisement -

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಹತ್ತಾರು ವರ್ಷಗಳಿಂದ ಪಕ್ಷಕ್ಕೆ ನಿಷ್ಠರಾಗಿ ಸಂಘಟನೆ, ರಾಜಕೀಯವಾಗಿ ಕಾರ್ಯನಿರ್ವಹಿಸುತ್ತಿರುವ ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ನೀಡದಂತೆ ತಡೆಯಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಟಿಕೆಟ್ ನೀಡಲು ಮುಂದಾಗಬೇಕು. ಎಲ್ಲರಿಗೂ ಸಮಪಾಲು ಎಂದು ಹೇಳುವ ಬಿಜೆಪಿ ನಾಯಕರು ಕುರುಬ ಸಮಾಜಕ್ಕೆ ಅನ್ಯಾಯವಾಗದಂತೆ ಎಚ್ಚರವಹಿಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“8 ಮಂದಿ ಲಿಂಗಾಯತರಿಗೆ ನಾಲ್ಕು ಮಂದಿ ಒಕ್ಕಲಿಗ ಸಮೂದಾಯವರಿಗೆ ಟಿಕೆಟ್ ನೀಡಿರುವಾಗ ಕುರುಬ ಸಮಾಜದವರಿಗೂ ಸಮಾನ ಅವಕಾಶವನ್ನು ನೀಡಬೇಕು. ಇಲ್ಲ ಕುರುಬ ಸಮಾಜದ ವೋಟು ಬೇಡವೆಂದು ಹೇಳಲಿ” ಎಂದು ಆಗ್ರಹಿಸಿದರು.

“ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ದೊರೆಯದೇ ಹೋದಲ್ಲಿ ಸಮಾಜದ ಬೆಂಬಲ ಸಿಗುವುದು ಕಷ್ಟ. ಜಿಲ್ಲೆಯೊಂದರಲ್ಲಿಯೇ 3 ಲಕ್ಷ ಸಮಾಜದ ವೋಟುಗಳಿವೆ. ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಲು ಸಮಾಜದ ಜನರು ಯೋಚಿಸಬೇಕಾಗುತ್ತದೆ. ಶೀಘ್ರ ಬಿಜೆಪಿ ಪಕ್ಷದ ನಾಯಕರು ನಿರ್ಧಾರ ಕೈಗೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗೆಜೆಟೆಡ್ ಪ್ರೋಬೇಷನರಿ ಹುದ್ದೆ ನೇಮಕಾತಿಯಲ್ಲಿ ವಯಸ್ಸಿನ ವಿನಾಯ್ತಿ ನೀಡಲಿ: ರಝಾಕ್ ಉಸ್ತಾದ್

ಈ ಸಂದರ್ಭದಲ್ಲಿ ಬಿ ಬಸವರಾಜ, ನಾಗರಾಜ ಮಡ್ಡಿಪೇಟೆ, ಶಿವರಾಜ ಮರ್ಚಟ್ಹಾಳ, ಶೇಖರ ವಾರದ, ಬಡೆಪ್ಪ ಮಟಮಾರಿ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...