ರಾಯಚೂರು | ರೈತರ ಅಗತ್ಯತೆಗಳ ಈಡೇರಿಕೆಗೆ ಆಗ್ರಹ

Date:

ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ಕಪ್ಪುಪಟ್ಟಿ ಕಟ್ಟಿಕೊಂಡು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

“ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ರದ್ದುಪಡಿಸಬೇಕು, ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಐತಿಹಾಸಿಕ ದೆಹಲಿ ಹೋರಾಟದ ಸಂದರ್ಭದಲ್ಲಿ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು, ಪ್ರವಾಹ ಹಾಗೂ ಬರಗಾಲದ ಪ್ರಕೃತಿ ವಿಕೋಪಗಳಿಗೆ ಪರಿಹಾರ ಒದಗಿಸಬೇಕು, ಕೃಷಿ ಉತ್ಪನ್ನಗಳ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಪ್ರತಿಯೊಂದು ದುಡಿಮೆಗೂ ಜೀವನಾವಶ್ಯಕ ಕನಿಷ್ಟ ವೇತನವಾಗಿ ಮಾಸಿಕ ₹26 ಸಾವಿರ ನಿಗದಿಪಡಿಸಬೇಕು. ರೈತರ ಹಾಗೂ ಎಲ್ಲ ಗ್ರಾಮೀಣ ಜನರ ಸಾಲಗಳನ್ನು ಮನ್ನಾ ಮಾಡಬೇಕು. ಪ್ರತಿಯೊಬ್ಬರಿಗೂ ಕನಿಷ್ಟ ₹10,000 ನಿವೃತ್ತಿ ವೇತನ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ 200 ದಿನಗಳ ಉದ್ಯೋಗ ಹಾಗೂ ಕನಿಷ್ಟ ₹600 ಕೂಲಿ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಿರುಕುಳ; ಲೈಂಗಿಕ ಅಲ್ಪಸಂಖ್ಯಾತರ ಆರೋಪ

ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಮುಖಂಡರುಗಳಾದ ಪ್ರಭಾಕರ್ ಪಾಟೀಲ್, ಕೆ ಜಿ ವೀರೇಶ, ಡಿ ಎಸ್ ಶರಣ ಬಸವ, ಎಚ್ ಪದ್ಮಾ, ಬೂದಯ್ಯ ಸ್ವಾಮಿ ಗಬ್ಬೂರು, ಮಲ್ಲಣ್ಣ ದಿನ್ನಿ, ಎಸ್ ಮಾರೆಪ್ಪ, ಖಾಜಾ ಅಸ್ಲಂ ಅಹಮದ್, ಶ್ರೀನಿವಾಸ ಕೊಪ್ಪರ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...