ರಾಯಚೂರು | ಹೆಲ್ಮೆಟ್ ಕಡ್ಡಾಯ ಆದೇಶ ಹಿಂಪಡೆದು, ರಸ್ತೆ ಸುಧಾರಣೆಗೆ ಅಧಿಕಾರಿಗಳು ಸಮಯ ಕೊಡಲು ಆಗ್ರಹ

Date:

Advertisements

ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ದಂಡ ಹಾಕುವುದನ್ನು ಎರಡು ತಿಂಗಳು ಸ್ಥಗಿತಗೊಳಿಸಿ ರಸ್ತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ರಾಜೇಶ ಕುಮಾರ ಮನವಿ ಮಾಡಿದರು.

ರಾಜ್ಯ ಸರ್ಕಾರ ಈ ಹಿಂದೆ ಹೆಲ್ಮೆಟ್ ಕಡ್ಡಾಯ ಆದೇಶ ಮಾಡಿದರೂ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ಮಾಡಿಲ್ಲ. ಆದರೆ ನವೆಂಬರ್ 1ರಿಂದ ರಾಯಚೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಏಕಾಏಕಿ ದಂಡ ವಸೂಲಿ ಮಾಡುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಗುಣಮಟ್ಟದ ರಸ್ತೆಯಿಲ್ಲ, ಸಿಗ್ನಲ್, ಸಿಸಿ ಕ್ಯಾಮೆರಾ, ಸ್ಪೀಡ್ ಬ್ರೇಕರ್ಸ್  ಅಳವಡಿಸಿಲ್ಲ. ಇದನ್ನು ಮೊದಲು ಅಳವಡಿಸಿ ರಸ್ತೆ ಸುರಕ್ಷತೆ ಕೈಗೊಳ್ಳಬೇಕು. ಬಳಿಕ ಹೆಲ್ಮೆಟ್ ಧರಿಸದವರಿಗೆ ದಂಡ ಹಾಕಲಿ ಎಂದು ಸೋಮವಾರ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಒತ್ತಾಯಿಸಿದರು.

ಹೆಲ್ಮೆಟ್ ಧರಿಸದ ದ್ರಿಚಕ್ರ ವಾಹನ ಸವಾರರಿಗೆ ₹500 ರಿಂದ ₹1000 ದಂಡ ಹಾಕುವುದರಿಂದ ರಸ್ತೆ ಬದಿಯಲ್ಲಿ ಅನೇಕ ವ್ಯಾಪಾರಸ್ಥರು ಕಂಡಕಂಡಲ್ಲಿ ಕಳಪೆ ಹೆಲ್ಮೆಟ್ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸವಾರರ ಸುರಕ್ಷತೆಗೆ ಖಾತ್ರಿ ಇಲ್ಲದಂತಾಗಿದೆ. ಪೊಲೀಸ್ ಇಲಾಖೆಯಿಂದ ಇದನ್ನು ಪರಿಶೀಲಿಸಿ ಕಳಪೆ ಹೆಲ್ಮೆಟ್ ವಶಕ್ಕೆ ಪಡೆದು ಕ್ರಮ ಕೈಗೊಳ್ಳಬೇಕು. ವಾಹನಗಳ ಬಿಡಿ ಭಾಗ ಮಾರಾಟ ಮಾಡುವವರಿಗೆ ಗುಣಮಟ್ಟದ ಹೆಲ್ಮೆಟ್ ಮಾರಾಟ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

Advertisements

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

2 ದಿನಗಳ‌ ಒಳಗೆ ರಸ್ತೆ ಸುರಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲನೆ ಮಾಡಿ ಅಪಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ವಿದ್ಯಾರ್ಥಿಗಳ ಜೊತೆಗೂಡಿ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ರಾಜು, ಅಗಸ್ಟೀನ್, ಆಂಜನೇಯ ಮತ್ತಿತರರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X