ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

Date:

Advertisements

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಜೂನ್‌ 3ರಂದು ಕಲಬುರಗಿ ಶಿಕ್ಷಣ ಆಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕೆ ಎಚ್ ಪದ್ಮಾ ಹೇಳಿದ್ದಾರೆ.

ರಾಯಚೂರು ನಗರದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಸರ್ಕಾರದಿಂದ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿರುವದರಿಂದ ಅಂಗನವಾಡಿ ಶಾಲೆಗಳು ಮುಚ್ಚಿ ಹೋಗಲಿವೆ. ಹಾಗಾಗಿ ಅಂಗನವಾಡಿ ಕೇಂದ್ರಗಳನ್ನೇ ಎಲ್‌ಕೆಜಿ, ಯುಕೆಜಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿ ವಿರೋಧಿಸಿದ್ದರೂ ಸರ್ಕಾರ ಈ ವರ್ಷದಿಂದಲೇ ಎಲ್‌ಕೆಜಿ, ಯುಕೇಜಿ ಶಾಲೆಗಳನ್ನು ಪ್ರಾರಂಭಿಸಲು ಆದೇಶ ನೀಡಿ ಪ್ರಕ್ರಿಯೆ ಪ್ರಾರಂಭಿಸಿದೆ. ಮಕ್ಕಳ ಕಲಿಕೆ ಹಾಗೂ ಆರೋಗ್ಯಕ್ಕೆ ಒತ್ತು ನೀಡಿ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಹತ್ತಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ” ಎಂದರು.

Advertisements

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳು ಹಾಗೂ ಗರ್ಭಿಣಿಯರ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಸರ್ಕಾರ ನಡೆಸುವ ಸಮೀಕ್ಷೆಗಳು, ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದೆ. ಸರ್ಕಾರದ ನಿರ್ಧಾರದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿಹೋಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಸಾಧ್ಯತೆಗಳಿವೆ. ಕಾರಣ ಕೂಡಲೇ ಸರ್ಕಾರದಿಂದ ಹೊಸದಾಗಿ ಪ್ರಾರಂಭಿಸಲಾಗುವ ಎಲ್‌ಕೆಜಿ, ಯುಕೆಜಿ ಶಾಲೆಗಳೆಂದು ಅಂಗನವಾಡಿ ಕೇಂದ್ರಗಳನ್ನೇ ಮೇಲ್ದರ್ಜೆಗೇರಿಸಬೇಕೆಂದು ಹೋರಾಟ ನಡೆಯಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವರಲಕ್ಷ್ಮಿ, ರಂಗಮ್ಮ, ಡಿ ಎಸ್ ಶರಣಬಸವ ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X