ರಾಯಚೂರು | ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನ; ಪಕ್ಷದಿಂದ ಸಿ ಟಿ ರವಿ ಉಚ್ಚಾಟನೆಗೆ ಶ್ರೀದೇವಿ ನಾಯಕ ಆಗ್ರಹ

Date:

Advertisements

ಅಂಬೇಡ್ಕರ್ ಅಪಮಾನ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿ ಟಿ ರವಿ ಅವಾಚ್ಯ ಶಬ್ದದಿಂದ ನಿಂದಿಸಿರುವುದರಿಂದ ಕೂಡಲೇ ಆತನನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ನಾಯಕಿ ಶ್ರೀದೇವಿ ನಾಯಕ ಆಗ್ರಹಿಸಿದರು.

“ಗೃಹಮಂತ್ರಿ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದಾರೆಂದು ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನ ಪರಿಷತ್ ಸದನದಲ್ಲಿ ಪ್ರತಿಭಟಿಸುವಾಗ ಸಿಟಿ ರವಿ ತಾಳ್ಮೆ ಕಳೆದುಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿಗರ ಬೇಟಿ ಪಡಾವ್, ಬೇಟಿ ಬಚಾವ್ ಎಂದು ಚುನಾವಣೆ ಗಿಮಿಕ್‌ ಮಾಡುತ್ತಿದ್ದಾರೆಯೇ ಹೊರತು ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ. ಈಗ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವುದು ಅವರ ಕೀಳು ಮಟ್ಟದ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತಿದೆ” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಬಿಎಸ್‌ಪಿ ಆಗ್ರಹ

“ಬಿಜೆಪಿಯವರ ಮಹಿಳೆ ಹಾಗೂ ದಲಿತರ ಪರವಾದ ಸರ್ಕಾರ ನಮ್ಮದು‌ ಎಂಬ ಬಿಜೆಪಿಗರ ಭಾಷಣ ಕೇವಲ ವೇದಿಕೆಗಳಿಗೆ ಸೀಮಿತವಾಗಿದೆ. ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವ ಇರುವುದೇ ಆದರೆ ಸಿ ಟಿ ರವಿ ಅವರನ್ನು ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X