ರಾಯಚೂರು | ಎಸ್‌ಸಿ ಒಳಮೀಸಲಾತಿ ಜಾರಿ ಕುರಿತು ಡಿ.12ರಂದು ಸಂವಾದ ಸಭೆ

Date:

Advertisements

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತಂತೆ ಡಿಸೆಂಬರ್ 12ರಂದು ನಗರದ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಸಂಜೆ 5ಕ್ಕೆ ಎಲ್ಲ ಮುಖಂಡರೊಂದಿಗೆ ಮುಕ್ತ ಸಂವಾದ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ಚರ್ಚಿಲಾಗುತ್ತದೆ ಎಂದು ವೈಸ್ ಆಫ್ ಸೋಶಿಯಲ್ ಜಸ್ಟೀಸ್ ಫೋರಂ ರಾಜ್ಯ ಸಂಚಾಲಕ ಅಂಬಣ್ಣ ಆರೋಲಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮಾದಿಗ ದಂಡೋರ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಇವರ ನೇತೃತ್ವದಲ್ಲಿ ಹೈದರಾಬಾದ್‌ನಲ್ಲಿ ನಡೆದ ಮಹಾಸಮಾವೇಶದ ನಂತರ ಒಳಮೀಸಲಾತಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೊದಿ ಹಾಗೂ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಳಮೀಸಲಾತಿ ಕುರಿತಂತೆ ಮಾತನಾಡಲು ಪ್ರಾರಂಭಿಸಿದ್ದಾರೆ. ಮೀಸಲಾತಿ ಹೋರಾಟಕ್ಕೆ ಮಂದ ಕೃಷ್ಣ ಮಾದಿಗರ ಕೊಡುಗೆ ದೊಡ್ಡದಿದೆ” ಎಂದು ಹೇಳಿದರು.

“ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಆಯೋಗ ಒಳಮೀಸಲಾತಿಗೆ ಸೂಚನೆ ನೀಡಿತ್ತು. ಆದರೆ ಆರ್‌ಎಸ್‌ಎಸ್ ಪ್ರೇರಿತ ಬಿಜೆಪಿ ನಾಯಕರು ಗೊಂದಲ ಸೃಷ್ಟಿಸುವ ಕೆಲಸ ಮಾಡು‌ತ್ತಿದ್ದಾರೆ. ಜನವರಿ 17 ರಂದು ಸುಪ್ರಿಂಕೋರ್ಟಿನಲ್ಲಿ ಒಳಮೀಸಲಾತಿ ಕುರಿತು ವಿಚಾರಣೆ ಪ್ರಾರಂಭವಾಗಲಿದೆ. ಹೈದರಾಬಾದಿನ ಸಮಾವೇಶದ ನಂತರ ಸಮೂದಾಯ ಜನರನ್ನು ಒಂದು ಪಕ್ಷಕ್ಕೆ ಒತ್ತೆಯಿಡಲಾಗುತ್ತಿದೆ. ಎಂಬೆಲ್ಲ ಆರೋಪಗಳನ್ನು ತಿಳಿಗೊಳಿಸುವ ಮೂಲಕ ಮುಂದಿನ ಹೋರಾಟ ರೂಪಿಬೇಕಿದೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅದರೆ ಸ್ಪೃಷ್ಯ ಜಾತಿಗಳು ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ” ಎಂದರು.

Advertisements

“ಸದಾಶಿವ ಆಯೋಗದ ವರದಿಯಲ್ಲಿ ಭೋವಿ, ವಡ್ಡರ, ಕೊರಮ, ಕೊರಚ, ಲಂಬಾಣ ಸಮೂದಾಯಗಳಿಗೆ ಮೀಸಲು ಕಡಿತಗೊಳಿಸಲಾಗುತ್ತದೆ ಎಂಬ ಸುಳ್ಳು ಹರಡುವ ಕುತಂತ್ರ ನಡೆಸಲಾಗುತ್ತಿದೆ. ಪಕ್ಷಾತೀತವಾಗಿ ನಡೆಯುವ ಹೋರಾಟದಲ್ಲಿ ಸಮಾಜದ ಮುಖಂಡರುಗಳು ಭಾಗಿಯಾಗಿ ಮುಂದಿನ ಹೋರಾಟ ನಿರ್ಧರಿಸಬೇಕಿದೆ. ಆರ್‌ಎಸ್‌ಎಸ್ ಪ್ರಾಯೋಜಿತ ಮಾದಿಗ ಮುನ್ನಡೆ ಅಭಿಯಾನದ ಅಪಾಯಗಳ ಕುರಿತು ಚರ್ಚಿಸಲಾಗುತ್ತದೆ” ಎಂದರು.

“ಸದಾಶಿವ ಆಯೋಗದ ವರದಿ ಅಪ್ರಸ್ತುತವೆಂದು ಹೇಳಲಾಗದು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಗೆ ರಾಜ್ಯದ ಶಿಫಾರಸಿನ ಮೇರೆಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭಾವುಕರಾಗಿ ಅಪ್ಪಿಕೊಂಡು ಮಾತನಾಡಿರುವುದು ಅಪರಾಧವೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶೈಕ್ಷಣಿಕ ಪ್ರಗತಿಯೊಂದೇ ಸಮುದಾಯದ ಉನ್ನತಿಗೆ ಕಾರಣ: ಶಿವಲೀಲಾ ವಿನಯ ಕುಲಕರ್ಣಿ

“ಮಾನ್ವಿ ಮದ್ಲಾಪುರು ಪ್ರಸಾದ ಕೊಲೆ ಪ್ರಕರಣ ನಿಲ್ಲಿಸಿಲ್ಲ. ಅಧಿವೇಶನದ ನಂತರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಅಬ್ರಹಾಂ ಹೊನ್ನಟಗಿ, ಜನಾರ್ಧನ ಹಳ್ಳಿ ಬೆಂಚಿ, ನರಸಿಂಹಲು, ಶರಣಬಸವ, ಹನುಮೇಶ, ನರಸಿಂಹಲು, ಜಂಬಣ್ಣ ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X