ರಾಯಚೂರು | ಬಿತ್ತನೆ ಬೀಜ ಗುಣಮಟ್ಟ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ರಾಯಚೂರು ಮತ್ತು ದೇವದುರ್ಗ ತಾಲೂಕಗಳಲ್ಲಿ ಹತ್ತಿ ಬೆಳೆ ಕುಂಠಿತವಾಗಲು ಕಳಪೆ ಬೀಜ ಕಾರಣವೆಂದು ರೈತರು ಆರೋಪಿಸಿದ್ದಾರೆ. ಬಿತ್ತನೆ ಬೀಜಗಳ ಗುಣಮಟ್ಟದ ಪರೀಕ್ಷೆ ನಡೆಸಿ, ಕಳಪೆ ಬೀಜಗಳನ್ನು ಮಾರಾಟ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ ಸೂಚಿಸಿದರು.

ರಾಯಚೂರಿನಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಇಲಾಖೆ ಅಧಿಕಾರಗಳ ಜೊತೆ ಶುಕ್ರವಾರ ಅವರು ಸಭೆ ನಡೆಸಿದ್ದು, ಕೃಷಿ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. “ಹತ್ತಿ ಬೀಜವು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಬೀಜ ಮಾರಾಟಗಾರರು ಕಡ್ಡಾಯವಾಗಿ ಬೀಜ ದರ ಪಟ್ಟಿ ನಮೂದಿಸುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ರೈತ ನಾಯಕ ಚಾಮರಸ ಮಾಲಿ ಪಾಟೀಲ್, “ಹತ್ತಿ ಬೀಜ ಕಳಪೆಯಾಗಿದ್ದರಿಂದ ಬೆಳೆ ಕೆಂಪುರೋಗಕ್ಕೆ ತುತ್ತಾಗಿ ಇಳುವರಿ ಕುಸಿತವಾಗಿದೆ. ಬೆಳೆ ನಷ್ಟವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ” ಎಂದು ರೈತ ಮುಖಂಡ ಚಾಮರಸ ಮಾಲಿಪಾಟೀಲ್ ಹೇಳಿದರು.

Advertisements

ಕೃಷಿ ಜಂಟಿ ನಿರ್ದೆಶಕಿ ದೇವಿಕಾ ಮಾತನಾಡಿ, “ಈಗಾಗಲೇ ಕೃಷಿ ಇಲಾಖೆ ಹಾಗೂ ಕೃಷಿವಿಜ್ಞಾನಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ಕುಂಠಿತವಾಗಲು ಬೀಜ ಕಾರಣವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ, ಇಲಾಖೆಯಿಂದ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳ ನಿಯುಕ್ತಿಗೊಳಿಸಿ ಹತ್ತಿ ಬೀಜ ಮಾರಾಟದ ಮೇಲೆ ನಿಗಾವಹಿಸಲಾಗುತ್ತಿದೆ” ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ, ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರು, ರೈತ ಸಂಘಗಳ ಮುಖಂಡರಾದ ಪ್ರಭಾಕರ ಪಾಟೀಲ್, ಬೂದೆಯ್ಯಸ್ವಾಮಿ, ಶರಣಪ್ಪ ಮರಳಿ,ಸೂಗುರಯ್ಯ ಸ್ವಾಮಿ ಮಠದ, ದೇವರಾಜ ನಾಯಕ, ಶರಣಪ್ಪ ಮರಳಿ, ರಾಮುಲು ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X