ರಾಯಚೂರು | ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ ಕಾರ್ಯ ನೆರವೇರಿಸಿದ ವೈದ್ಯರು!

Date:

Advertisements

ಚಿನ್ನದ ಗಣಿಗೆ ಪ್ರಸಿದ್ಧವಾದ ಹಟ್ಟಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಹೆರಿಗೆ ನಡೆಸಬೇಕಾದ ದುಸ್ಥಿತಿ ಎದುರಾದ ಘಟನೆ ನಡೆದಿದೆ.

ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ವೇಳೆ ಗರ್ಭಿಣಿಯೋರ್ವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ವೈದ್ಯರು ಹಾಗೂ ಸಿಬ್ಬಂದಿ ಟಾರ್ಚ್ ಹಿಡಿದು ಹೆರಿಗೆ ನೆರವೇರಿಸಬೇಕಾದ ದುಸ್ಥಿತಿ ಎದುರಾಯಿತು.

ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಸಮಯದಲ್ಲಿ ಗರ್ಭಿಣಿ ಮಹಿಳೆಗೆ ಪ್ರಸವ ವೇದನೆ ಆರಂಭವಾಗಿತ್ತು. ತಕ್ಷಣ ಆಸ್ಪತ್ರೆ ತಲುಪಿದ ಆಕೆಗೆ ಕತ್ತಲಿನಲ್ಲೇ ವೈದ್ಯರು ಹಾಗೂ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಟಾರ್ಚ್ ಹಿಡಿದು ಶಸ್ತ್ರಚಿಕಿತ್ಸೆ ನಡೆಸಿ, ಹೆರಿಗೆ ನೆರವೇರಿಸುವ ಪರಿಸ್ಥಿತಿ ನಿರ್ಮಾಣವಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಾವು ಕಡಿತ : ರೈತ ಸಾವು

ಆಸ್ಪತ್ರೆಯಲ್ಲಿ ಸರಿಯಾದ ವಿದ್ಯುತ್ ವ್ಯವಸ್ಥೆಯೇ ಇಲ್ಲ. ವಿದ್ಯುತ್ ಹೋದರೆ ಪರ್ಯಾಯ ವ್ಯವಸ್ಥೆ ಇರಬೇಕು. ಚಿನ್ನದ ಗಣಿಯಲ್ಲಿ ಈ ರೀತಿ ಘಟನೆ ಆಗುತ್ತಿದೆ ಅಂದರೆ ಹೇಳಲು ಮುಜುಗರವಾಗುತ್ತಿದೆ,” ಎಂದು ಸ್ಥಳೀಯ ನಿವಾಸಿ ಲಾಲ್ ಪೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1002200996

ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕಗೊಂಡಾಗ ಪರ್ಯಾಯವಾಗಿ ವ್ಯವಸ್ಥೆ ಯುಪಿಎಸ್ ಇದೆ. ಆದಿನ ಯುಪಿಎಸ್ ಕೆಟ್ಟ ಹೋಗಿದ್ದ ಕಾರಣ ಹಾಗೂ ಹೆರಿಗೆ ಸಮಯದಲ್ಲಿ ವಿದ್ಯುತ್ ಸಂಪರ್ಕಗೊಂಡ ಕಾರಣಕ್ಕೆ ಘಟನೆ ಆಗಿದೆ ಎಂದು ಆಸ್ಪತ್ರೆ ಸಿಬ್ಬಂದಿಯೋರ್ವರು ಮಾಹಿತಿ ನೀಡಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X