ರಾಯಚೂರು| ವರದಕ್ಷಿಣೆ ಕಿರುಕುಳ ಸಾವು;ಆರೋಪಿ ಬಂಧಿಸುವಲ್ಲಿ ವಿಫಲರಾದ ಸಿಪಿಐ ಅಮಾನತಿಗೆ ಆಗ್ರಹ

Date:

Advertisements

ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.

ನಗರದ ಗುರುಭವನದಿಂದ ಆರಂಭಗೊಂಡು, ಬಸ್ ನಿಲ್ದಾಣ, ನಗರದ ಮುಖ್ಯ ರಸ್ತೆಗಳ ಮೂಲಕ ಸಹಾಯಕ ಆಯುಕ್ತ ಕಚೇರಿವರೆಗೆ ಸಿಪಿಐ ವಿರುದ್ಧ ಘೋಷಣೆ ಹಾಕುವ ಮೂಲಕ ಮೆರವಣಿಗೆ ನಡೆಸಿ ಸಹಾಯಕ ಆಯುಕ್ತರ ಕಚೇರಿಗೆ ಮನವಿ ಸಲ್ಲಿಸಿದರು.

ಮೃತ ಶಾಂತಲಾನ್ನು ಸುನೀಲ್ ಎನ್ನುವ ವ್ಯಕ್ತಿಯ ಜೊತೆ ವಿವಾಹವಾಗಿರುತ್ತದೆ. ಮದುವೆ ನಂತರ ಸುನೀಲ್ ಹಾಗೂ ಅವರ ಕುಟುಂಬಸ್ಥರು ನಿರಂತರ ವರದಕ್ಷಣೆ ಕಿರುಕುಳ, ಮಕ್ಕಳಾಗಿಲ್ಲ ಎಂದು ದೈಹಿಕವಾಗಿ ಮಾನಸಿಕವಾಗಿ ಕಿರುಕುಳ ನೀಡಿದ್ದರಿಂದ ಶಾಂತಲಾ ಆರೋಗ್ಯ ಸಂಪೂರ್ಣ ಹದೆಗಟ್ಟು ಸಾವನ್ನಪ್ಪಿದ್ದು, ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ಏಪ್ರಿಲ್ 09 ರಂದು ಪ್ರಕರಣ ದಾಖಲಾಗಿರುತ್ತದೆ.

Advertisements

ಪ್ರಕರಣ ದಾಖಲಾಗಿ ಒಂದು ತಿಂಗಳು ಕಳೆದರೂ ಸಿಪಿಐ ಪುಂಡಲೀಕ ಪಟಾತರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗೂ ನೊಂದ ಕುಟುಂಬಸ್ಥರು ಕೇಳಿದರೆ ಉಡಾಫೆ ಉತ್ತರ ನೀಡುವುದು ಮತ್ತು ಆರೋಪಿಗಳ ಜೊತೆ ಶಾಮೀಲಾಗಿ ಕಾಲಹರಣ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತಕ್ಷಣ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |ಕಾರ್ಮಿಕರ ಲೇಬರ್ ಕಾರ್ಡ್ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ಶಾಂತಲಾನ್ನು ನಿರಂತರ ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂದು ದೈಹಿಕ ಮಾನಸಿಕವಾಗಿ ನೊಂದು ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದು, ಸಾಕ್ಷಿ ಸಮೇತ ಪೊಲೀಸ್ ಠಾಣೆಗೆ ದೂರು ನೀಡಿದರು ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ಜೊತೆ ಠಾಣೆಯಲ್ಲಿ ಚರ್ಚಿಸಿದಾಗ ನಮ್ಮ ಹತ್ತಿರ ಆಪ್ಷನ್ ಇಲ್ಲ, ನಾನು ಬಂಧಿಸಿದರೆ ಕೆಲಸದಿಂದ ವಜಾಗೊಳ್ಳುತ್ತೇನೆ. ನೀವು ಎಲ್ಲಿಗೆ ಹೋಗ್ತೀರಾ ಎಂದು ಉಡಾಫೆ ಉತ್ತರ ಕೊಡುವ ಮೂಲಕ ಮಾತನಾಡಿದ್ದಾರೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ಪೋಲಿಸರು ಮುಂದಾಗಬೇಕು ಹೊರೆತು ಆರೋಪಿಗಳ ಜೊತೆ ಶಾಮೀಲಾಗಿ ಪ್ರಕರಣವನ್ನು ತಮಗೆ ಸಂಬಂಧವಿಲ್ಲದಂತೆ ಇದ್ದಾನೆ ಎಂದು ಕಿಡಿಕಾರಿದರು.

ಕೂಡಲೇ ಸರಕಾರ ಸಿಪಿಐರನ್ನು ಅಮಾನತುಗೊಳಿಸಿ ಹಾಗೂ ಸಂಬಂಧ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಮುಖಂಡರಾದ ಸಾಹೀರಾ ಬಾನು, ಶಾಂತಕುಮಾರಿ, ಡಿವೈಎಫ್ಐ ನ ಜಿಲ್ಲಾ ಸಮಿತಿ ಸದಸ್ಯ ಚನ್ನಬಸವ ವಂದ್ಲಿಹೊಸೂರು, ಕೆಪಿಆರ್ ಎಸ್ ಮುಖಂಡರಾದ, ಅಪ್ಪಣ್ಣ ಕಾಂಬಳೆ, ನಿಂಗಪ್ಪ ಎಂ, ಆಂಜನೇಯ, ಹನುಮಂತ ಚಲುವಾದಿ, ಮಹಾಂತೇಶ ಬುದ್ದಿನ್ನಿ, ಸಿಐಟಿಯುನ ಶ್ರೀದರ್, ಖಾಜಾ ಮೈನುದ್ದೀನ್, ಬಾಬಾಜಾನಿ, ಶಂಸುದ್ದೀನ್, ಶಾಂತಲಾ ತಂದೆ ನರಸಿಂಗಪ್ಪ, ನಾರಾಯಣ್ ಗೊಂದಳಿ, ತುಕಾರಾಂ, ಶಂಕರ್, ಸುನೀಲ್, ಅನೀಲ್, ನಾಮದೇವ, ಕೃಷ್ಣ, ದೇವು ಸಿಂದೆ, ಬಾಲಕೃಷ್ಣ, ರವಿ ಪಾತಂಗೆ, ರಾಹುಲ್ ಸೇರಿದಂತೆ ಕುಟುಂಬಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X