ರಾಯಚೂರು | ನಕಲಿ ನೋಟು ಚಲಾವಣೆ ಮಾಡುತ್ತಿದ್ದ 10 ಜನ ಅರೆಸ್ಟ್

Date:

Advertisements

ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 36 ನಕಲಿ ನೋಟುಗಳು ವಶಪಡಿಸಿ 10 ಜನ ಆರೋಪಿಗಳನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ.

ಸೀಕಲ್ ಸಮೀಪದ ಚಹಪುಡಿ ಕ್ಯಾಂಪಿನ ನಿವಾಸಿ ವಿರೂಪಾಕ್ಷಿ, ಶೇಖರ್, ಶಾಸ್ತ್ರೀ ಕ್ಯಾಂಪಿನ ಹುಸೇನ್ ಬಾಷಾ, ಮಾಚನೂರು ಗ್ರಾಮದ ಖಾಜಾ ಹುಸೇನ್, ಸಿರವಾರ ಪಟ್ಟಣದ ಸಿದ್ದನಗೌಡ, ಅಮರೇಶ ಗಡ್ಡೆರಾಯನ ಕ್ಯಾಂಪ್, ಮಾನ್ವಿ ಪಟ್ಟಣದ ಅಜ್ಮೀರ್, ಸಿಂಧನೂರಿನ ಆಲಂ ಬಾಷಾ, ರಾಯಚೂರಿನ ನರಸಯ್ಯ ಶೆಟ್ಟಿ, ಕಾರಟಗಿಯ ಭೀಮೇಶ ಬಂಧಿತರು ಎನ್ನಲಾಗಿದೆ.

ಮೇ 13ರಂದು ಪಟ್ಟಣದ ಇಂಡಿಯನ್ ಬ್ಯಾಂಕ್ ಶಾಖೆಯ ಎಟಿಎಂ ಕೇಂದ್ರದಲ್ಲಿ ಸೀಕಲ್ ಗ್ರಾಮ ಸಮೀಪದ ಚಹಪುಡಿ ಕ್ಯಾಂಪ್ ನಿವಾಸಿ ವಿರೂಪಾಕ್ಷಿ ಎನ್ನುವವರು ಇಂಡಿಯನ್ ಬ್ಯಾಂಕಿನ ತಮ್ಮ ಖಾತೆಗೆ ₹18 ಸಾವಿರ ಮೊತ್ತದ ₹500 ಮುಖ ಬೆಲೆಯ 36 ಖೋಟಾ ನೋಟುಗಳನ್ನು ಜಮಾ ಮಾಡಿರುವುದನ್ನು ಬ್ಯಾಂಕಿನ ವ್ಯವಸ್ಥಾಪಕ ಪತ್ತೆ ಹಚ್ಚಿ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Advertisements

ಈ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಹಾಗೂ ಸಿಂಧನೂರು ಡಿವೈಎಸ್ಪಿ ಬಿ.ಎಸ್.ತಳವಾರ ಮಾರ್ಗದರ್ಶನದಲ್ಲಿ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬ್ಯಾಂಕಿನಲ್ಲಿ ಜಮಾ ಮಾಡಿದ್ದ ₹18 ಸಾವಿರ ಮೊತ್ತದ ₹500 ಮುಖಬೆಲೆಯ 36 ಖೋಟಾನೋಟುಗಳು, ಒಂದು ಕಾರ್, ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ಸಿಂಧನೂರು ಬಂದ್‌

ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ನೇತೃತ್ವದ ಪೊಲೀಸ್ ಸಿಬ್ಬಂದಿ ತಂಡದ ಕಾರ್ಯಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X