ರಾಯಚೂರು | ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬ: ನ್ಯಾಯಾಲಯದ ಆದೇಶದಂತೆ ನೀರಾವರಿ ಇಲಾಖೆಯ ಕಚೇರಿ ಪೀಠೋಪಕರಣ ಜಪ್ತಿ

Date:

Advertisements

ಸಿರವಾರ ತಾಲ್ಲೂಕಿನ ಹಿರೇದಿನ್ನಿ ಗ್ರಾಮದ ರೈತ ಕರಿಯಪ್ಪ ಅವರ ಕುಟುಂಬಕ್ಕೆ ಭೂಸ್ವಾಧೀನ ಪರಿಹಾರವಾಗಿ ನಿಗದಿಯಾದ ರೂ.16.30 ಲಕ್ಷ ಹಣ ವಿತರಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡಿದ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿ (ವಿಭಾಗ-4), ಸಿರವಾರ ಪಟ್ಟಣದಲ್ಲಿ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

ಮಾನ್ವಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದನ್ವಯ ನ್ಯಾಯಮೂರ್ತಿ ನೇತೃತ್ವದಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿದ್ದು, ಕೆಲಸಕ್ಕಾಗಿ ಬಳಸುತ್ತಿದ್ದ ಕಂಪ್ಯೂಟರ್‌ಗಳು, ಮೇಜು, ಕುರ್ಚಿ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದರು.

1000156548

ಘಟನೆ ವಿವರ; ಸಿರವಾರ ತಾಲ್ಲೂಕಿನ ಹಿರೇಬಾದರದಿನ್ನಿ ಗ್ರಾಮದ ಸರ್ವೇ ನಂ.113 ರಲ್ಲಿನ 15 ಗುಂಟೆ ಜಮೀನನ್ನು, 1976 ರಲ್ಲಿ ಬಾಗಲವಾಡ ಗ್ರಾಮದಿಂದ ಗೊಲ್ಲದಿನ್ನಿ ಗ್ರಾಮವರೆಗೆ ಆಯಾಕಟ್ಟು ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಲಾಗಿತ್ತು. ಭೂಮಿ ಕಳೆದುಕೊಂಡ ಹಲವಾರು ರೈತರಿಗೆ ಪರಿಹಾರ ಹಣವನ್ನು ಸರಕಾರ ನೀಡಿದರೂ, ತಾಂತ್ರಿಕ ದೋಷದಿಂದಾಗಿ ಹದಿನೈದು ಗುಂಟೆ ಭೂಮಿ ಕಳೆದುಕೊಂಡ ರೈತ ಕರಿಯಪ್ಪ ಅವರ ಕುಟುಂಬವು ಇದುವರೆಗೂ ಪರಿಹಾರದಿಂದ ವಂಚಿತರಾಗಿದ್ದಾರೆ.

ನಿನ್ನೆ ನ್ಯಾಯಾಲಯದ ಆದೇಶದಂತೆ ಸಿರವಾರ ಪಟ್ಟಣದ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿ (ವಿಭಾಗ-4)ಯಲ್ಲಿ ಪೀಠೋಪಕರಣಗಳನ್ನು ಜಪ್ತಿ ಮಾಡಲಾಯಿತು. ಕಂಪ್ಯೂಟರ್‌ಗಳು, ಸೇರಿದಂತೆ ಕಚೇರಿಯ ವಿವಿಧ ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಗಾಯ

Advertisements

ನ್ಯಾಯಾಲಯವು ಈ ಹಿಂದೆಯೇ 3-4 ಬಾರಿ ಜಪ್ತಿಗೆ ಆದೇಶ ನೀಡಿದರೂ ಇಲಾಖೆಯ ಅಧಿಕಾರಿಗಳು ರೈತನಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಒಟ್ಟು ರೂ.16,30,323 ಪರಿಹಾರ ಮೊತ್ತವನ್ನು ರೈತ ಕರಿಯಪ್ಪ ಅವರ ಕುಟುಂಬಕ್ಕೆ ನೀಡಬೇಕೆಂದು ಆದೇಶಿಸಲಾಗಿದೆ. ಪರಿಹಾರ ನೀಡದೇ ಕಾರಣಕ್ಕೆ ಜಪ್ತಿ ಕ್ರಮ ಕೈಗೊಳ್ಳಲಾಯಿತು,” ಎಂದು ರೈತ ಪರ ವಕೀಲ ಶಿವರಾಜ ಪಾಟೀಲ ತಿಳಿಸಿದರು.

1000156545















ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X