ರಾಯಚೂರು | ಬೆಳೆ ಪರಿಹಾರ ಸೇರಿ ವಿವಿಧ ಬೇಡಿಕೆಗೆ ಹೆದ್ದಾರಿ ತಡೆದು ರೈತರ ಪ್ರತಿಭಟನೆ

Date:

ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗೆ ಪರಿಹಾರ ಹಾಗೂ ಜೋಳ ಕಣ ಮಾಡಿ ನಾಲ್ಕು ತಿಂಗಳು ಕಳೆದರೂ ಇದುವರೆಗೂ ಹಿಂಗಾರು ನೋಂದಣಿ ಪ್ರಕ್ರಿಯೆ ಆರಂಭವಾಗಿಲ್ಲ ತಕ್ಷಣ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೇರಿ ನಾನಾ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರೈತರು ಪ್ರತಿಭಟಿಸಿದರು.

ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಹತ್ತಿರ ಬಳಗಾನೂರ ಕ್ರಾಸ್ ಬಳಿ ನೂರಾರು ರೈತರು ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿ ಸಿಂಧನೂರು ತಹಶೀಲ್ದಾರ ಅರುಣಾ ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಒಂದು ವಾರದ ಹಿಂದೆ ಸುರಿದ ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿಯಾಗಿದ್ದು ನಷ್ಟ ಅನುಭವಿಸಿದ ರೈತರಿಗೆ ವೈಜ್ಞಾನಿಕವಾಗಿ ಪರಿಹಾರ ಒದಗಿಸಬೇಕು.ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಸರ್ಕಾರವು ಕರಾಳ ಕೃಷಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಬಾರದು.ಇದರಿಂದ ರೈತರಿಗೆ ಸಮಸ್ಯೆ ಎದುರಾಗಿದ್ದು ಕೂಡಲೇ ರದ್ದುಪಡಿಸಬೇಕು.ವಿದ್ಯುತ್ ಖಾಸಗೀಕರಣವನ್ನು ನಿಲ್ಲಿಸಬೇಕು ಮತ್ತು ಗ್ರಾಮೀಣ ಭಾಗದಲ್ಲಿ ಮರಳು ಮಾಫಿಯಾದಿಂದ ರೈತರು ಬೇಸತ್ತು ಹೋಗಿದ್ದಾರೆ ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಕ್ಕೊತ್ತಾಯ ಸಲ್ಲಿಸಿದರು.

1000105450



ಪ್ರತಿಭಟನೆಯಲ್ಲಿ ಜೇನೂರು ,ತಡಕಲ್ ,ಧೋತರಬಂಡಿ , ಊಟಕನೂರು , ಬನ್ನಿಗನೂರು , ರಾಮತ್ನಾಳ, ದಿದ್ದಿಗಿ , ಮುದ್ದಮಗುಡ್ಡಿ, ಕರಾಬ್ ,ದಿನ್ನಿ ,ಸೇರಿ ಸುತ್ತಮುತ್ತಲಿನ ಇನ್ನಿತರ ಗ್ರಾಮಗಳ ರೈತರು ಭಾಗವಹಿಸಿದ್ದರು.




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...