ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ

Date:

Advertisements

ರಾಯಚೂರು-ಮಾನ್ವಿ ಎಕ್ಸ್‌ಪ್ರೆಸ್‌ ಹೈವೆ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡು ಹೆದ್ದಾರಿ ಪ್ರಾಧಿಕಾರದವರು ರೈತರ ಜಮೀನನ್ನು ಬಳಸಿಕೊಂಡು ರೈತರಿಗೆ ಈವರೆಗೆ ಭೂಸ್ವಾಧೀನ ಪರಿಹಾರದ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ಕಚೇರಿಗಳಿಗೆ ಅಲೆದಾಡುವಂತಾಗಿದೆ.

ರಾಯಚೂರು ಜಿಲ್ಲಾ ಕೇಂದ್ರದಿಂದ ಮಾನ್ವಿ ತಾಲೂಕಿಗೆ ತೆರಳುವ ಮಾರ್ಗ ಮಧ್ಯದ ಕಲ್ಲೂರು ಗ್ರಾಮದ 30 ಮಂದಿ ರೈತರ ಜಮೀನನ್ನು ವಶಪಡಿಸಿಕೊಂಡು ಇನ್ನೂ ಪರಿಹಾರ ನೀಡದೆ ಹಾಗೂ ಎಕರೆಗೆ ತಕ್ಕಂತೆ ಯಾವುದೇ ದರ ಹೇಳದೆ ಸತಾಯಿಸುತ್ತಿದ್ದಾರೆ ಎಂಬುದು ರೈತರ ಆರೋಪವಾಗಿದೆ.

ಅಧಿಕಾರಿಗಳು ಜಮೀನು ವಶಪಡಿಸಿಕೊಂಡು ಕಾಮಗಾರಿ ಪ್ರಾರಂಭಿಸಿದ್ದಾರೆ. ಆದರೆ ನೀರಾವರಿ ಭೂಮಿ, ಖುಷ್ಕಿ ಭೂಮಿ ಒಂದು ಎಕರೆಗೆ ಎಷ್ಟು ಹಣ ಎಂಬುದಾಗಿ ಜಮೀನಿನ ಬೆಲೆ ಕುರಿತು ಯಾವುದೇ ರೀತಿಯ ಮಾಹಿತಿ ನೀಡದೆ ರಸ್ತೆ ಕಾಮಗಾರಿ ಪ್ರಾರಂಭಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ.

Advertisements
ಹೆದ್ದಾರಿ ಕಾಮಗಾರಿ

ಜಮೀನು ಕಳೆದುಕೊಂಡ ಭೀಮರಾಯ ಕಲ್ಲೂರು ಮಾತನಾಡಿ,”ನಮಗೆ 2 ಎಕರೆ ಜಮೀನಿದೆ. ಹುಟ್ಟಿದಾಗಿನಿಂದಲೂ ವ್ಯವಸಾಯ ಕೃಷಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇವೆ. ಈಗ ರಸ್ತೆ ಕಾಮಗಾರಿಗಾಗಿ ನಮ್ಮ ಭೂಮಿ ಕಳೆದುಕೊಂಡಿದ್ದೇವೆ. ಅವರು ನೀಡುವ ಹಣದಿಂದ ಬೇರೆ ಕಡೆ ಒಂದಿಂಚು ಜಾಗವನ್ನೂ ಖರೀದಿಸಲು ಸಾಧ್ಯವಿಲ್ಲ. ಜಮೀನಿನ ಪರಿಹಾರದ ಹಣ ಕೊಡುವುದಕ್ಕೇ ನಮ್ಮನ್ನು ಸಾವಿರಾರು ಬಾರಿ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಲ್ಲೂರು ಗ್ರಾಮದ ಪಕ್ಕದ ಕಪಗಲ್ ಗ್ರಾಮದ ಭೂಮಿ ಕಳೆದುಕೊಂಡ ರೈತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಆದರೆ ಕಲ್ಲೂರ ಗ್ರಾಮದ 30 ಮಂದಿ ರೈತರಿಗೆ ಒಂದು ಪೈಸೆಯೂ ಹಣ ಕೊಟ್ಟಿಲ್ಲ, ಜಮೀನಿನಲ್ಲಿ ಸಾವಿರಾರು ಹಣ ಖರ್ಚುಮಾಡಿ ಬೆಳೆ ಬಿತ್ತನೆ ಕಾರ್ಯ ನಡೆದಿದೆ. ಆದರೆ ರಸ್ತೆ ಕಾಮಗಾರಿಗೆಂದು ಭೂಮಿ ವಶಪಡಿಸಿಕೊಂಡು ರೈತರನ್ನು ಕಂಗಾಲು ಮಾಡಿದ್ದಾರೆ” ಎಂದರು.

ಸಂತ್ರಸ್ತ ರೈತ

ರೈತ ಮುಖಂಡ ಸಾಜೀದ ಮಾತನಾಡಿ, “ಹೈವೆ ರಸ್ತೆಗಾಗಿ ರೈತರ ಒಂದು ಏಕರೆಯಷ್ಟು ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಕೆಲವು ಕಡೆ ಇನ್ನೂ ಹೆಚ್ಚಿನ ಭೂಮಿಯನ್ನು ವಶಪಡಿಸಿಕೊಂಡಿದ್ದು, ಯಾವುದೇ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ತಮ್ಮ ಖಾತೆಗೆ ಹಾಕಲಾಗುವುದೆಂದು ಕೇವಲ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು ಪರಿಹಾರ ನೀಡುತ್ತಿಲ್ಲ” ಎಂದು ಅಸಮಾದಾನ ವ್ಯಕ್ತಪಡಿಸಿದರು.

“ರೈತರು ರಸ್ತೆಗಾಗಿ ಜಮೀನು ಬಿಟ್ಟು ಕೊಟ್ಟಿರುತ್ತಾರೆ. ಪ್ರತಿ ಎಕರೆಗೆ ₹30,000ದಿಂದ ₹40,000ರದವರೆಗೆ ಹಣ ಖರ್ಚು ಮಾಡಿ ಬೆಳೆ ಬಿತ್ತನೆ ಮಾಡಲಾಗಿದೆ. ಬರಗಾಲ ಪರಿಸ್ಥಿತಿಯಿದ್ದು, ಹೇಗೂ ಆಗಾಗ ಮಳೆ ಬಂದು ಆಸರೆಯಾಗಿದೆ. ಇವೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ನೀಡದಿರುವುದು ಅತಿದೊಡ್ಡ ಸಮಸ್ಯೆಯಾಗಿದೆ” ಎಂದರು.

ರೈತ ಮುಖಂಡ

“ರೈತರರಿಗೆ ಹಲವು ಬಗೆಯ ಸಮಸ್ಯೆಗಳು ಕಾಡುತ್ತಿವೆ. ಹೈವೆ ರಸ್ತೆ ನಿರ್ಮಾಣ ಮಾಡಲು ಸಾವಿರಾರು ಕಾರ್ಮಿಕರು, ಬೃಹತ್ ಲಾರಿ, ಜೆಸಿಬಿ ಸೇರಿದಂತೆ ಇತರ ವಾಹನಗಳು ಬೆಳೆ ಜಮೀನಿನ ಪಕ್ಕದಲ್ಲಿ ತಿರುಗಾಡುತ್ತಿರುವುದರಿಂದ ಬಿತ್ತಿದ ಬೆಳೆಗಳು ಕುಂಠಿತಗೊಂಡಿವೆ. ಅಲ್ಲದೆ ಜಮೀನು ಸರ್ವೇಯಲ್ಲಿ ತಾರತಮ್ಯ ಎಸಗಿದ್ದಾರೆ. ಇವೆಲ್ಲಾ ಸಮಸ್ಯೆ ಎದುರಿಸುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ; ಎಲ್ಲೆಲ್ಲಿ?

ಮಾನ್ವಿಯಿಂದ ಪ್ರಾರಂಭವಾದ ರಸ್ತೆ ಕಾಮಗಾರಿ ಕಪಗಲ್, ಕಲ್ಲೂರು, ಸಾತ್ ಮೈಲ್ ಮೂಲಕ ರಾಯಚೂರು ಜಿಲ್ಲಾ ಕೇಂದ್ರದವರೆಗೂ ಕಾಮಗಾರಿ ನಡೆಯುತ್ತಿದೆ. ಕೆಲವು ರೈತರಿಗೆ ಹೆದ್ದಾರಿ ಪ್ರಾಧಿಕಾರದಿಂದ ಕಡಿಮೆ ಪರಿಹಾರ ಬಂದಿದೆ. ನೀರಾವರಿ ಭೂಮಿಯನ್ನು ಖುಷ್ಕಿ ಭೂಮಿಯೆಂದು ಗುರುತಿಸಿ ಕಡಿಮೆ ಪರಿಹಾರ ನೀಡಲಾಗಿದೆಯೆಂಬ ಆರೋಪವಿದೆ” ಎಂದು ಹೇಳಿದರು.

“ರಸ್ತೆಗಾಗಿ ಭೂಮಿಯೂ ಹೋಯಿತು. ಈಗ ಬೆಳೆದ ಬೆಳೆಯೂ ಧೂಳಿನಿಂದ ಹಾಳಾಗಿದೆ. ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಧ್ಯಸ್ಥಿಕೆ ವಹಿಸಿ ರೈತರ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X