ರಾಯಚೂರು | ಕೃಷಿ ಹೊಂಡದ ಹೆಸರಲ್ಲಿ ಕಲ್ಲು ಗಣಿಗಾರಿಕೆ: ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು!

Date:

ಕೃಷಿ ಹೊಂಡದ ಹೆಸರಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿರುವ ಆರೋಪ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ಕೇಳಿಬಂದಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು ಮೂಡುತ್ತಿರುವುದಾಗಿ ಗ್ರಾಮದ ಮಂದಿ ನೋವು ತೋಡಿಕೊಂಡಿದ್ದಾರೆ.

- Advertisement -

ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಸುತ್ತಮುತ್ತ ಮನೆಗಳು ಬಿರುಕು ಬಿಟ್ಟು ಇಂದು,ನಾಳೆ ಬೀಳುವ ಪರಿಸ್ಥಿತಿ ಉಂಟಾಗುತ್ತಿದೆ. ಇವರಿಗೆಲ್ಲಾ ಯಾರು ಅನುಮತಿ ನೀಡಿದ್ದು ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬೆಟ್ಟದೂರು ಗ್ರಾಮದಲ್ಲಿ ಮೇ ಸುಚಿತ್ ಮಿಲೇನಿಯಂ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಕೃಷಿಹೊಂಡ ಕೆಲಸ ನಿರ್ವಹಿಸುವುದೆಂದು ಪರವಾನಗಿ ಪಡೆದಿದ್ದಾರೆ. ಕಂಪನಿಯ ಮಾಲೀಕರು ಕಲ್ಲು ಗಣಿಗಾರಿಕೆ ಪ್ರಾರಂಭಿಸಿ ಅಲ್ಲಿನ ಕಲ್ಲುಗಳನ್ನು ಬ್ಲಾಸ್ಟ್ ಮಾಡಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

rc1 1

ತಾಲೂಕಿನ ಬೆಟ್ಟದೂರು ಗ್ರಾಮದ ನೀರಮಾನ್ವಿ ಸೀಮಾಂತರದಲ್ಲಿ ಬರುವ ಸ.ನಂ:55/1/ ವಿಸ್ತೀರ್ಣ 11 ಎಕರೆ 07 ಗುಂಟೆ ಪೈಕಿ 5 ಎಕರೆ ಜಮೀನಿನಲ್ಲಿ ಮತ್ತು ಸ.ನಂ: 56/1 ವಿಸ್ತೀರ್ಣ 7-03 ಗುಂಟೆ ಪೈಕಿ 5 ಎಕರೆ ಜಮೀನಿನಲ್ಲಿ ಕಲ್ಲು ಬಂಡೆಗಳಿಂದ ಕೂಡಿದ್ದು ಅದನ್ನು ಕೃಷಿ ಹೊಂಡ ನಿರ್ಮಿಸುವುದು ಎಂದು ದಾಖಲೆ ನೀಡಿ ಅನುಮತಿ ಪಡೆಯಲಾಗಿತ್ತು. ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದರಿಂದ ಗ್ರಾಮಸ್ಥರಿಗೆ, ರೈತರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ*

ಈ ಬಗ್ಗೆ ಜನಸೇವಾ ಫೌಂಡೇಶನ್ ಜಾವೀದ್ ಖಾನ್ ಮಾತನಾಡಿ, “ಕಂಪನಿಯ ಮುಖ್ಯಸ್ಥರು ಕೃಷಿಹೊಂಡ ನಿರ್ಮಿಸಿ ರೈತರಿಗೆ ಉದ್ಯೋಗ ನೀಡಲಾಗುವುದೆಂದು ಕಾನೂನು ರೀತಿಯಲ್ಲಿ ಪರವಾನಗಿ ಪಡೆದು ಅನಧಿಕೃತವಾಗಿ ಕಲ್ಲುಗಣಿಗಾರಿಕೆ ಕೆಲಸ ಪ್ರಾರಂಭಿಸಿ ಜನರನ್ನು ಒಕ್ಕಲೆಬ್ಬಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

rc2 1

ಕಲ್ಲು ಗಣಿಗಾರಿಕೆಯಲ್ಲಿ ದಿನಕ್ಕೆ ಏಳೆಂಟು ಬಾರಿ ಬ್ಲಾಸ್ಟ್ ಮಾಡುತ್ತಾರೆ. ಗಣಿಗಾರಿಕೆ ನಡೆಸಲಾಗುವ ಸ್ಥಳಕ್ಕೂ ಗ್ರಾಮಕ್ಕೂ ಬರೀ 300 ಮೀಟರ್ ಅಂತರವಿದೆ. ಬ್ಲಾಸ್ಟ್ ನಡೆಸುತ್ತಿರುವ ಕಾರಣದಿಂದ ಸುತ್ತಮುತ್ತಲಿನ 200 ಕ್ಕಿಂತಲೂ ಹೆಚ್ಚು ಮನೆಗಳ ಗೋಡೆ, ಕಾಂಪೌಂಡ್ ಗೋಡಗಳಲ್ಲಿ ಬಿರುಕು ಮೂಡುತ್ತಿದೆ. ಮುಂದಿನ ದಿನಗಳಲ್ಲಿ ಇದು ಬೀಳಲೂಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಗಣಿಗಾರಿಕೆ ನಡೆಸುತ್ತಿರುವುದರಿಮ ನಿತ್ಯ ನೂರಾರು ಸಂಖ್ಯೆಯಲ್ಲಿ ಬೃಹತ್ ಲಾರಿಗಳು ಟಿಪ್ಪರ್‌ಗಳು ಗ್ರಾಮದಲ್ಲಿ ಓಡಾಡುತ್ತಿವೆ. ಇದರಿಂದ ಗ್ರಾಮದೆಲ್ಲಡೆ ಧೂಳಿನ ವಾತಾವರಣ ಸೃಷ್ಟಿಯಾಗಿದೆ. ಜನರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗ್ರಾಮಸ್ಥರಿಗೆ ಧೂಳು ಸಮಸ್ಯೆಯಾಗಿ ಬಿಟ್ಟಿದೆಯಲ್ಲದೇ, ಜಮೀನಲ್ಲಿ ರೈತರು ಬೆಳೆದ ಬೆಳೆಗಳು ಕೂಡ ಧೂಳಿನಿಂದಾಗಿ ನಾಶವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

raichur 5

ಯಾವುದನ್ನಾದರೂ ಕಾರ್ಯರೂಪಕ್ಕೆ ತರುವಾಗ ಜನರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕಿತ್ತು. ಅದಾಗಿಲ್ಲ. ಈ ಕಲ್ಲು ಗಣಿಗಾರಿಕೆಯಿಂದ ಗ್ರಾಮದ ಜನರ ನೆಮ್ಮದಿ ಹಾಳಾಗಿದೆ. ಇದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತರಲಾಗಿದೆ. ಈ ವರೆಗೆ ಈ ಬಗ್ಗೆ ಕ್ರಮ ಜರುಗಿಸಿಲ್ಲ. ತಕ್ಷಣ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಸ್ಥಳಕ್ಕೆ ಆಗಮಿಸಿ ಗಣಿಗಾರಿಕೆಯನ್ನು ನಿಲ್ಲಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂಬುದು ಗ್ರಾಮದ ಜನರ ಆಗ್ರಹ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...