ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

Date:

Advertisements

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು.

ಹೋರಾಟ ಕುರಿತು ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಮಾತನಾಡಿ, “ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನ್ಯಾಯಯುತವಾಗಿ ದೊರೆಯುತ್ತದೆಂದು ನಂಬಿದ್ದ ರೈತರು ಬೆಳೆವಾರು ವಂತಿಗೆ ಹಣವನ್ನು ಇನ್ಷೂರೆನ್ಸ್‌ ಕಂಪನಿಗೆ ನಗದು ತುಂಬಿದ್ದಾರೆ. ಆದರೆ ಇಲಾಖೆ ಅಧಿಕಾರಿಗಳು ಮಧ್ಯವರ್ತಿಗಳು ಸೇರಿ ಫಲಾನುಭವಿಗಳಿಗೆ ಹಣ ಸಿಗದೇ ಬೇರೆಯವರಿಗೆ ಸಿಕ್ಕಿದೆ ಕೂಡಲೇ ತನಿಖೆ ಮಾಡಿ ನಿಜವಾದ ಫಲಾನುಭವಿಗಳಿಗೆ ಸಿಗುವಂತೆ ಮಾಡಬೇಕು” ಎಂದು ಒತ್ತಾಯಿಸಿದರು.

“ರೈತರ ಬೆಳೆ ನಷ್ಟಕ್ಕೆ ಕೃಷಿ ಇಲಾಖೆ ಕಂದಾಯ ಇಲಾಖೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ ವರದಿ ಸಲ್ಲಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನೆ ಮಾಡಿ ಬೆಳೆಹಾನಿ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಬೇಕು” ಎಂದು ಆಗ್ರಹಿಸಿದರು.

Advertisements

“ನಿಯಮಗಳನ್ನು ಮೀರಿ ಫಸಲ್ ಭೀಮಾ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ.ಈ ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲ ಇಲಾಖೆಯ ಅಧಿಕಾರಿಗಳ ಮೇಲೆ ಹಾಗೂ ಯೋಜನೆಯ ಹಣ ದುರುಪಯೋಗ ಮಾಡಿಕೊಂಡಿರುವ ಮಧ್ಯವರ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಬೇಕು. ವಿಮಾ ಕಂಪೆನಿಗೆ ವಂತಿಗೆ ತುಂಬಿದ ನಿಜವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಕೃಷಿ ಇಲಾಖೆಯಿಂದ ಪ್ರವೀಣ್ ಹಾಗೂ ದೇವದುರ್ಗ ತಾಲೂಕು ದಂಡಾಧಿಕಾರಿ ಚನ್ನಮಲ್ಲಪ್ಪ ಗಂಟಿ, ನಾಡ ತಹಶೀಲ್ದಾರ್ ವಿಕಾಸ ಕೋಳೂರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಮೋಸ ಮಾಡಿದವರ ವಿರುದ್ಧ ನಾಲ್ಕು ದಿನಗಳೊಳಗೆ ಸೂಕ್ತ ಕ್ರಮ‌ ಜರುಗಿಸುವುದಾಗಿ ಪತ್ರದ ಮೂಲಕ ಲಿಖಿತ ಭರವಸೆ ನೀಡಿದರು.

ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಧರಣಿ ಹಿಂಪಡೆದುಕೊಂಡರು. ಜೆಡಿಎಸ್ ಮುಖಂಡ ಸಿದ್ದನಗೌಡ ಮೂಡಲಗುಂಡ ಹೋರಾಟಕ್ಕೆ ಬೆಂಬಲ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ

ತಾಲೂಕು ಅಧ್ಯಕ್ಷ ಹನುಮಂತ ಗುರಿಕಾರ, ಮೌನೇಶ ಜಾಲಹಳ್ಳಿ, ದುರ್ಗಪ್ಪ ವರಟಿ, ರಂಗನಾಥ ಬುಂಕಲದೊಡ್ಡಿ, ಹನುಮಂತ ಮಂಡಲಗುಡ್ಡ, ಮಲ್ಲಪ್ಪ ಮುಂಡರಗಿ, ಮೂರ್ತಿ, ಭೂಜಪ್ಪ, ರೈತರುಗಳಾದ ಬಸವರಾಜ ತೇಕರು, ತಮ್ಮಣ್ಣ ಸೇರಿದಂತೆ ಇತರರು ಇದ್ದರು.

ವರದಿ : ಶಿವರಾಂ ಕಟ್ಟಿಮನಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X