ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

Date:

Advertisements

ಅರಣ್ಯ ಇಲಾಖೆಯವರು ರೈತರು ಬೆಳೆದ ಬೆಳೆಗಳನ್ನು ಜೆಸಿಬಿ ಮೂಲಕ ನಾಶ ಮಾಡಿದ್ದು, ಅಪಾರ ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳಿಗೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ರೈತರಿಗೆ ಪರಿಹಾರ ಒದಗಿಸಬೇಕು ಎಂದು ರಾಜ್ಯ ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿದರು.

ಬೆಳೆ ನಾಶಗೊಂಡ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಶುಕ್ರವಾರದಂದು ಅಮರೇಶ್ವರ ಕ್ರಾಸ್‌ನಿಂದ ನಾಶ ಮಾಡಿದ ಜಮೀನವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲಾಗುವುದು ಎಂದು ಹೇಳಿದರು.

ತಾಲೂಕಿನ ಯರಡೋಣ ಸೀಮಾಂತರ ಸರ್ವೇ ನ. 32ರಲ್ಲಿ ಸುಮಾರು 25 ಜನರಿಗೆ ಭೂಮಿ ಮಂಜೂರಾಗಿದ್ದು, ಸುಮಾರು ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುತ್ತಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ಬಂದು, ಯಾವುದೇ ನೋಟಿಸ್ ನೀಡದೆ ರೈತರನ್ನು ಕೃಷಿ ಭೂಮಿಯಿಂದ ಒಕ್ಕಲೆಬ್ಬಿಸಿ ಬೆಳೆಯನ್ನು ನಾಶ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಕಿಡಿಕಾರಿದರು.

Advertisements

ದೇವರಭೂಪೂರು ಶೀಮಾಂತರದ 151. 155, 159 ಹಾಗೂ ಪರಾಂಪೂರು ಸೀಮಾಂತರ 61 ಸೇರಿದಂತೆ ಇನ್ನುಳಿದ ತಾಲೂಕಿನಲ್ಲಿರುವ ಕೃಷಿ ಜಮೀನಿನನ್ನು ರೈತರಿಗೆ ಒದಗಿಸಿ ಹದ್ದುಬಸ್ತು ಮಾಡಬೇಕು ಹಾಗೂ ತಕ್ಷಣ ತಪ್ಪಿತಸ್ಥರ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಲಿಂಗಸುಗೂರು ಪುರಸಭೆಗೆ ಅಧ್ಯಕ್ಷರಾಗಿ ಬಾಬುರೆಡ್ಡಿ ಅವಿರೋಧ ಆಯ್ಕೆ

ಬೃಹತ್ ಮೆರವಣಿಗೆ ದಿನವನ್ನು ತಾವುಗಳು ಹೋರಾಟದ ಸ್ಥಳಕ್ಕೆ ಆಗಮಿಸಿ ರೈತರ ಆಹವಾಲುಗಳನ್ನು ಸ್ವೀಕರಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಮನವಿ ನೀಡಿದರು.

ಸಂದರ್ಭದಲ್ಲಿ ಉಮಾದೇವಿ , ದುರ್ಗಾಪ್ರಸಾದ ರೆಡ್ಡಿ , ಶಿವಪುತ್ರಗೌಡ ನಂದಿಹಾಳ , ಶರಣಪ್ಪ , ಲಕ್ಷಣ ನಾಗರಹಾಳ ಹನುಮಂತ ,ಆದಪ್ಪ ನಾಯಕ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X