ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ 76/5ರ ವ್ಯಾಪ್ತಿಗೆ ನೀರು ಹರಿಸುವಂತೆ ರೈತರ ಆಗ್ರಹ

Date:

Advertisements

ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ- 76/5 ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದಿರುವ ಜೋಳ, ಮೆಣಸಿನಕಾಯಿ, ಹತ್ತಿ ಬೆಳೆಗಳಿಗೆ ನೀರು ಹರಿಸಬೇಕು ಎಂದು ಈ ವ್ಯಾಪ್ತಿಯ ರೈತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

“ವಿತರಣಾ ಕಾಲುವೆ ಸಂಖ್ಯೆ 76/5ರ ವ್ಯಾಪ್ತಿಯಲ್ಲಿ ಸುಮಾರು 6 ಗ್ರಾಮಗಳು ಸೇರಿದ್ದು, ಜಿನೂರು ಕ್ಯಾಂಪ್, ಜಿನೂರು, ಪೋತ್ನಾಳ, ಮುದ್ದಂಗುಡ್ಡಿ, ಈರಲಗಡ್ಡೆ, ಖಾರಬದಿನ್ನಿ, ಈ ಗ್ರಾಮಗಳಲ್ಲಿ ಜೋಳವನ್ನು ಹೆಚ್ಚಾಗಿ ಬೆಳೆಯಲಾಗಿದೆ. ಮಳೆ ಬಾರದ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿವೆ. ಜೋಳ, ಮೆಣಸಿನಕಾಯಿ ಮತ್ತು ಹತ್ತಿ ಬೆಳೆಗಳನ್ನೂ ಬೆಳೆದಿದ್ದು, ಸಮರ್ಪಕವಾಗಿ ಮಳೆಯಾಗದೆ ಇರುವುದರಿಂದ ಬೆಳೆದು ನಿಂತ ಬೆಳೆಗಳು ಒಣಗಿ ಹೋಗಿದ್ದು, ಲಕ್ಷಾಂತರ ರೂ ಸಾಲ ಮಾಡಿ ಬೆಳೆದ ಬೆಳೆಗಳು ಹಾನಿಯಾಗಿರುವುದರಿಂದ ರೈತರಿಗೆ ತುಂಬಲಾರದ ನಷ್ಟ ಉಂಟಾಗಿದೆ” ಎಂದು ಹೇಳಿದರು.

“ರೈತರು ಜಮೀನುಗಳಲ್ಲಿ ಬೆಳೆದ ಬೆಳೆ ನಷ್ಟವಾಗಿವೆ. ಜೀವನ ನಿರ್ವಹಣೆಗೆ ಸಾಲ ಮಾಡಿ ಬೆಳೆ ಬೆಳೆದಿದ್ದು, ಸಾಲ ತೀರಿಸಲು ಜಮೀನುಗಳನ್ನು ಮಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಕುಟುಂಬಗಳು ಆರ್ಥಿಕ ನಷ್ಟಕ್ಕೆ ತಲುಪಿದ್ದು, ಜೀವನಕ್ಕಾಗಿ ಗುಳೆ ಹೋಗುವ ಹಂತಕ್ಕೆ ಬಂದಿದೆ. ಹಾಗಾಗಿ ರೈತರು ಬೆಳೆದಿರುವ ಬೆಳೆಗಳನ್ನಾದರೂ ಉಳಿಸಿಕೊಳ್ಳಲು ಕಾಲುವೆಗೆ ನೀರನ್ನು ಹರಿಸಿದರೆ ಅನುಕೂಲವಾಗುತ್ತದೆ. ಒಂದು ವಾರದಲ್ಲಿ ನೀರು ಹರಿಸದಿದ್ದರೆ, ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ರಾಜ್ಯದಲ್ಲಿ ಬರ ನಿರ್ವಹಣೆಗೆ ₹ 400 ರಿಂದ ₹ 500 ಕೋಟಿ ಮೀಸಲು: ಜಿ ಪರಮೇಶ್ವರ್

ಈ ಸಂದರ್ಭದಲ್ಲಿ ಬುಡ್ಡಪ್ಪ, ಯಲ್ಲಪ್ಪ, ಚಿದಾನಂದ, ಅಣ್ಣಪ್ಪ, ಸಣ್ಣ ಅಯ್ಯಪ್ಪ, ಹುಚ್ಚಪ್ಪ, ಭೀಮೇಶಪ್ಪ, ಮಲ್ಲೇಶ, ಬಸವರಾಜ, ಶಿವಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X