ರಾಯಚೂರು | ತುಂಗಭದ್ರಾ ಎಡದಂಡೆ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುವಂತೆ ರಸ್ತೆ ತಡೆದು ಪ್ರತಿಭಟನೆ

Date:

Advertisements

ಸರಿಯಾದ ನಿರ್ವಹಣೆ ಇಲ್ಲದ ಕಾರಣ ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುತ್ತಿಲ್ಲ ಎಂದು ಸಿಪಿಐಎಂ ಸಂಘಟನೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ʼತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬರುವ 36, 54, 46, ವಿತರಣಾ ಕಾಲುವೆಯಲ್ಲಿ ಡಿಜೈನ್ ಪ್ರಕಾರ ನೀರು ಬಿಡುಗಡೆಯಾಗುತ್ತಿಲ್ಲ. ಈಗಾಗಲೇ ರೈತರು ಹೊಲದಲ್ಲಿ ಸಸಿಮಡಿಗಳನ್ನು ನೆಟ್ಟಿದ್ದು, ನೀರಿಲ್ಲದಂತಾಗಿದೆ. ಕೃಷಿ ಅಧಿಕಾರಿಗಳ ಪ್ರಕಾರ 30 ದಿನಗಳಲ್ಲಿ ಸಸಿ ನಾಟಿ ಮಾಡಿದರೆ ಮಾತ್ರ ಉತ್ತಮ ಇಳುವರಿ ಬರಲು ಸಾಧ್ಯವೆಂದು ಹೇಳಿದ್ದರು. ಆದರೆ ಸಮರ್ಪಕವಾಗಿ ನೀರಿಲ್ಲದೆ ಇದರಿಂದ ನಾಟಿ ಮಾಡಲು ಸಸಿಮಡಿ ಬರುವುದೂ ಕಷ್ಟಕರವಾಗಿದೆʼ ಎಂದು ಅಳಲು ತೋಡಿಕೊಂಡರು.

ʼತುಂಗಭದ್ರಾ ಡ್ಯಾಂನಲ್ಲಿ ನೀರಿನ ಕೊರತೆಯಿಲ್ಲ. ಅದರೂ ಡಿಸೆಂಬರ್ 15ರಿಂದ ಸರಿಯಾಗಿ 3,800 ಕ್ಯೂಸೆಕ್ ನೀರು‌ ಹರಿಸಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಅಧಿಕಾರಿಗಳ ಸರಿಯಾದ ನಿರ್ವಹಣೆಯಿಲ್ಲದ ಕಾರಣ ರೈತರಿಗೆ ನೋವುಂಟಾಗಿದೆ. ಸಂಘಟನಾಕಾರರು, ರೈತರು ಪ್ರತಿದಿನ ನೀರಾವರಿ ಅಧಿಕಾರಗಳನ್ನು ದೂಷಿಸುವುದೇ ಆಗಿದೆ. ಜನಪ್ರತಿನಿಧಿಗಳೂ ಕೂಡಾ ರೈತರ ಬಗ್ಗೆ ಗಮನ ಹರಿಸುತ್ತಿಲ್ಲʼ ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

ʼತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ನಿಗದಿಪಡಿಸಿದ ನೀರು ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಈ ಕುರಿತ ಕೂಡಲೇ ಸ್ಪಂದಿಸಿ ತೊಂದರೆಗಳನ್ನು ಸರಿಪಡಿಸಿ ನಿಗದಿತ ಗೇಜ್ ನೀಡಬೇಕು. ಇಲ್ಲದೆ ಹೋದಲ್ಲಿ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸಂಘಟನೆ ಮೊಕದ್ದಮೆ ಹೂಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X