ರಾಯಚೂರು | ನಾಲೆಗಳಿಗೆ ಏ.20ವರಗೆ ನೀರು ಹರಿಸಲು ರೈತರ ಅಹೋರಾತ್ರಿ ಧರಣಿ

Date:

Advertisements

ಕೃಷ್ಣ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ನಾಲೆಗಳಿಗೆ ಏಪ್ರಿಲ್ 20ರವರೆಗೆ ನೀರು ಹರಿಸಲು ಒತ್ತಾಯಿಸಿ ಲಿಂಗಸುಗೂರು ತಾಲೂಕಿನ‌ ಗುರುಗುಂಟಾ ಗ್ರಾಮದಿಂದ ತಾಲೂಕು ಸಹಾಯಕ ಆಯುಕ್ತ ಕಚೇರಿವರೆಗೆ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸಿ ಅಹೋರಾತ್ರಿ ಮನವಿ ಸಲ್ಲಿಸಲಾಯಿತು.

ಗುರುಗುಂಟ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರ ಬದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಧರಣಿ ನಡೆಸುತ್ತಿದ್ದು, 4ನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ, ಭಾನುವಾರ ರಾತ್ರಿ ಪೂರ್ತಿ ಭಜನೆ ಮಾಡುವ ಮೂಲಕ ಅಹೋರಾತ್ರಿ ಧರಣಿ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಭಾನುವಾರ ರಾತ್ರಿ ಹೊಸ ದರ್ಬಾರ್‌ನಿಂದ ಸಂಸ್ಥಾನಿಕ ರಾಜಸೋಮನಾಥನಾಯಕ ನೇತೃತ್ವದಲ್ಲಿ ಹೋಬಳಿಯ ನೂರಾರು ರೈತರು ಹಚ್ಚಿದ ಮೇಣದ ಬತ್ತಿಯನ್ನು ಕೈಯಲ್ಲಿಡಿದು ಶಾಂತಿ ದ್ಯೋತಕವಾದ ಜ್ಯೋತಿ ಮೆರವಣಿಗೆ ನಡೆಸಿದರು.

ಅಹೋರಾತ್ರಿಯ ಧರಣಿ 4ನೇ ದಿನಕ್ಕೆ ಪಾದಾರ್ಪಿಸಿದರೂ ಯಾವೊಬ್ಬ ಜನಪ್ರತಿನಿಧಿಗಳೂ ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿದ ರೈತರು, “ಶಾಂತಿಯ ಪ್ರತೀಕವಾಗಿ ಜ್ಯೋತಿಯ ಮೆರವಣಿಗೆ ನಡೆಸಿದ್ದೇವೆ. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಂಡು ಬೇಡಿಕೆಯನ್ನು ಪಡೆದೇ ಪಡೆಯುತ್ತೇವೆ. ಪ್ರಾಣ ಬಿಟ್ಟೆವು ಧರಣಿ ಹಿಂಪಡೆಯಲಾರೆವು ಎಂದು ಏರುದನಿಯಲ್ಲಿ ಕೂಗುತ್ತಾ ಮೆರವಣಿಗೆ ಸಾಗಿದರು.

ಇದನ್ನೂ ಓದಿ: ರಾಯಚೂರು | ಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ

ಈ ಮೆರವಣಿಗೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಶಿವಪುತ್ರಗೌಡ, ತಾಲೂಕ ಅಧ್ಯಕ್ಷ ಪ್ರಸಾದರೆಡ್ಡಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಅಂಗಡಿ, ರೈತ ಮುಖಂಡರಾದ ಚೆನ್ನಯ್ಯಸ್ವಾಮಿ, ಸೈಯದ್ ಖುಸುರು, ವಿಜಯಕುಮಾರ ನಾಯಕ, ಶ್ರೀಧರ್ ಪಟ್ಟಣಶೆಟ್ಟಿ, ತಿಪ್ಪಣ್ಣ ಹವಲ್ದಾರ್, ಹನುಮಂತ ಹುಲಗಪ್ಪದೊಡ್ಡಿ, ಮಹಾಂತೇಶ ಬಿಜ್ಜಲ್, ಭಾಷಸಾಬ್, ತಿರುಮಲ ಸುಬೇದಾರ್, ರಾಮಯ್ಯ, ಗಣೇಶ ರತ್ನಗಿರಿ, ಪವನ್ ಕುಲಕರ್ಣಿ, ಗುರು ಇಲ್ಲೂರು, ಶಿವಲಿಂಗ ಸೇರಿದಂತೆ ಅನೇಕರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X